ಕಾರ್ಕಳ, : ಹಿಂದೂ ಜಾಗರಣ ವೇದಿಕೆ ಹಾಗೂ ಭಜರಂಗದಳ ಕಾರ್ಯಕರ್ತರ ನಡುವೆ ಘರ್ಷಣೆ ನಡೆದು ಹಿಂದೂ ಜಾಗರಣ ವೇದಿಕೆ (ಹಿಂಜಾವೇ) ಸದಸ್ಯ ನಿಟ್ಟೆ ಗ್ರಾಮದ ಅನಿಲ್ ಪೂಜಾರಿ ಎಂಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 16 ರ ಮಂಗಳವಾರ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಭಜರಂಗದಳ ಕಾರ್ಯಕರ್ತರಾದ ಸುನಿಲ್, ಪ್ರಸಾದ್ ಹಾಗೂ ಶರತ್ ಎಂದು ಗುರುತಿಸಲಾಗಿದ್ದು ಮೂವರು ನಿಟ್ಟೆಯವರಾಗಿದ್ದಾರೆ.
ಇದನ್ನೂ ಓದಿ : http://ಉಡುಪಿ :ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವುದು ಕಂಡುಬ0ದಲ್ಲಿ ಕಠಿಣ ಕ್ರಮ -Vishwanews24
ಮಾರ್ಚ್ 14 ರ ರಾತ್ರಿ ನಿಟ್ಟೆಯಲ್ಲಿರುವ ಅನಿಲ್ ಪೂಜಾರಿ ಅವರ ಮನೆಗೆ ನುಗ್ಗಿದ ಗ್ಯಾಂಗ್ ಬಲವಂತವಾಗಿ ನುಗ್ಗಿ ಕತ್ತಿಯಿಂದ ಹಲ್ಲೆ ನಡೆಸಿತ್ತು. ಪ್ರಕರಣವನ್ನು ನೋಂದಾಯಿಸಿದ ಪೊಲೀಸರು, ಬಂಧನ ಕಾರ್ಯಾಚರಣೆ ಆರಂಭಿಸಿದ್ದು ಈ ಮೂವರು ಆರೋಪಿಗಳು ಬೆಳುವಾಯಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ತಡೆದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ಉಡುಪಿ : ಕೊರೊನಾ ಸುರಕ್ಷತಾ ನಿಯಮ ಪಾಲಿಸದಿದ್ದರೆ ದಂಡದ ಜೊತೆಗೆ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24
ಸುನೀಲ್, ಶರತ್ ಮತ್ತು ಪ್ರಸಾದ್ ಅವರು ಭಜರಂಗದಳದ ಸದಸ್ಯರು ಎಂದು ವರದಿಯಾಗಿದೆ. ಈ ಮಧ್ಯೆ ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಇನ್ನಿಬ್ಬರ ಹುಡುಕಾಟ ನಡೆಸುತ್ತಿದ್ದಾರೆ.
ಅಪರಾಧಿಗಳನ್ನು ಬಂಧಿಸುವ ಕಾರ್ಯಾಚರಣೆಯನ್ನು ಕಾರ್ಕಳ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ತೇಜಸ್ವಿ ಮತ್ತು ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಮಧು ಬಿ ಇ ಅವರು ಉಪ ಪೊಲೀಸ್ ವರಿಷ್ಠಾಧಿಕಾರಿ ಭರತ್ ರೆಡ್ಡಿ ಮತ್ತು ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಸಂಪತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಿರ್ವಹಿಸಿದರು.
ಇದನ್ನೂ ಓದಿ : ಉಡುಪಿ : ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲಾ ಇಲಾಖೆಗಳ ಜವಾಬ್ದಾರಿ : ಡಾ.ಅಂತೋನಿ ಸಬಾಸ್ಟಿಯನ್ -Vishwanews24
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…