Featured

ಕಾರ್ಕಳ : ಹಿಂಜಾವೇ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ; ಬಜರಂಗದಳದ ಮೂವರು ಕಾರ್ಯಕರ್ತರ ಬಂಧನ -Vishwanews24

ಕಾರ್ಕಳ : ಹಿಂಜಾವೇ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ; ಬಜರಂಗದಳದ ಮೂವರು ಕಾರ್ಯಕರ್ತರ ಬಂಧನ -Vishwanews24

ಕಾರ್ಕಳ, : ಹಿಂದೂ ಜಾಗರಣ ವೇದಿಕೆ ಹಾಗೂ ಭಜರಂಗದಳ ಕಾರ್ಯಕರ್ತರ ನಡುವೆ ಘರ್ಷಣೆ ನಡೆದು ಹಿಂದೂ ಜಾಗರಣ ವೇದಿಕೆ (ಹಿಂಜಾವೇ) ಸದಸ್ಯ ನಿಟ್ಟೆ ಗ್ರಾಮದ ಅನಿಲ್ ಪೂಜಾರಿ ಎಂಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 16 ರ ಮಂಗಳವಾರ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಭಜರಂಗದಳ ಕಾರ್ಯಕರ್ತರಾದ ಸುನಿಲ್‌, ಪ್ರಸಾದ್‌ ಹಾಗೂ ಶರತ್‌ ಎಂದು ಗುರುತಿಸಲಾಗಿದ್ದು ಮೂವರು ನಿಟ್ಟೆಯವರಾಗಿದ್ದಾರೆ.

ಇದನ್ನೂ ಓದಿ : http://ಉಡುಪಿ :ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವುದು ಕಂಡುಬ0ದಲ್ಲಿ ಕಠಿಣ ಕ್ರಮ -Vishwanews24

ಮಾರ್ಚ್ 14 ರ ರಾತ್ರಿ ನಿಟ್ಟೆಯಲ್ಲಿರುವ ಅನಿಲ್ ಪೂಜಾರಿ ಅವರ ಮನೆಗೆ ನುಗ್ಗಿದ ಗ್ಯಾಂಗ್‌ ಬಲವಂತವಾಗಿ ನುಗ್ಗಿ ಕತ್ತಿಯಿಂದ ಹಲ್ಲೆ ನಡೆಸಿತ್ತು. ಪ್ರಕರಣವನ್ನು ನೋಂದಾಯಿಸಿದ ಪೊಲೀಸರು, ಬಂಧನ ಕಾರ್ಯಾಚರಣೆ ಆರಂಭಿಸಿದ್ದು ಈ ಮೂವರು ಆರೋಪಿಗಳು ಬೆಳುವಾಯಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ತಡೆದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ : ಉಡುಪಿ : ಕೊರೊನಾ ಸುರಕ್ಷತಾ ನಿಯಮ ಪಾಲಿಸದಿದ್ದರೆ ದಂಡದ ಜೊತೆಗೆ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಸುನೀಲ್, ಶರತ್ ಮತ್ತು ಪ್ರಸಾದ್ ಅವರು ಭಜರಂಗದಳದ ಸದಸ್ಯರು ಎಂದು ವರದಿಯಾಗಿದೆ. ಈ ಮಧ್ಯೆ ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಇನ್ನಿಬ್ಬರ ಹುಡುಕಾಟ ನಡೆಸುತ್ತಿದ್ದಾರೆ.

ಅಪರಾಧಿಗಳನ್ನು ಬಂಧಿಸುವ ಕಾರ್ಯಾಚರಣೆಯನ್ನು ಕಾರ್ಕಳ ಗ್ರಾಮೀಣ ಪೊಲೀಸ್‌ ಠಾಣೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ತೇಜಸ್ವಿ ಮತ್ತು ನಗರ ಠಾಣೆ ಸಬ್ ಇನ್ಸ್‌ಪೆಕ್ಟರ್ ಮಧು ಬಿ ಇ ಅವರು ಉಪ ಪೊಲೀಸ್ ವರಿಷ್ಠಾಧಿಕಾರಿ ಭರತ್‌ ರೆಡ್ಡಿ ಮತ್ತು ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಸಂಪತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಿರ್ವಹಿಸಿದರು.

ಇದನ್ನೂ ಓದಿ : ಉಡುಪಿ : ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲಾ ಇಲಾಖೆಗಳ ಜವಾಬ್ದಾರಿ : ಡಾ.ಅಂತೋನಿ ಸಬಾಸ್ಟಿಯನ್ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

13 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

13 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

13 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

13 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

13 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

16 hours ago