Featured

ಕಾರ್ಕಳ: ಹಿಂದುತ್ವದ ಹೆಸರಿನಲ್ಲಿ ಬಿಜೆಪಿ  ಮಾಡಿದ ಲೂಟಿ- ಭ್ರಷ್ಟಾಚಾರ ಬೆಳಕಿಗೆ ತರುವ ಕೆಲಸ ನಾವು ಮಾಡುತಿದ್ದೇವೆ : ವಿನಯ ಕುಮಾರ್ ಸೊರಕೆ – Vishwanews24

ಕಾರ್ಕಳ: ಹಿಂದುತ್ವದ ಹೆಸರಿನಲ್ಲಿ ಬಿಜೆಪಿ  ಮಾಡಿದ ಲೂಟಿ- ಭ್ರಷ್ಟಾಚಾರ ಬೆಳಕಿಗೆ ತರುವ ಕೆಲಸ ನಾವು ಮಾಡುತಿದ್ದೇವೆ : ವಿನಯ ಕುಮಾರ್ ಸೊರಕೆ

ಕಾರ್ಕಳ: ಹಿಂದಿನ ಬಿಜೆಪಿ ಆಡಳಿತದ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಲ್ಲಿ ಬಿಜೆಪಿಯ ಜನಪ್ರತಿನಿಧಿಗಳು ಸೇರಿದಂತೆ ಪಕ್ಷೀಯರು ನಡೆಸಿದ ಕೋಟ್ಯಾಂತರ ರೂ.ಗಳ ಕರ್ಮಕಾಂಡಗಳನ್ನು ಬಹಿರಂಗಪಡಿಸುವ ಹಾಗೂ ಈ ವಿಷಯಗಳ ಬಗ್ಗೆ ಜನತೆಗೆ ತಿಳಿಸುವ ಕಾರ್ಯವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.

ನಿರ್ಮಿತಿ ಕೇಂದ್ರವು ಪರಶುರಾಮನ ಕಂಚಿನ ಪ್ರತಿಮೆ ಸ್ಥಾಪಿಸುವುದಾಗಿ ನಂಬಿಸಿ ಫೈಬರ್ ಪ್ರತಿಮೆ ಸ್ಥಾಪಿಸುವ ಮೂಲಕ ಜನತೆಗೆ ‘ನಂಬಿಕೆ ದ್ರೋಹ’ ಎಸಗಿದ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ಧ ಕಾರ್ಕಳ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್‌ನ ಸಹಯೋಗದಲ್ಲಿ ಸೋಮವಾರ ಕಾರ್ಕಳ ತಾಲೂಕು ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ಹಿಂದುತ್ವದ ಹೆಸರಿನಲ್ಲಿ ಅವರು ಮಾಡಿದ ಲೂಟಿ- ಭ್ರಷ್ಟಾಚಾರವನ್ನು ಬೆಳಕಿಗೆ ತರುವ ಕೆಲಸವನ್ನು ನಾವು ಮಾಡುತಿದ್ದೇವೆ. ಬ್ರಹ್ಮಾವರದಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ಬಿಜೆಪಿ ನಾಯಕನ ನೇತೃತ್ವದ ಆಡಳಿತ ಮಂಡಳಿ 15 ಕೋಟಿ ರೂ.ಗಳಿಗೂ ಅಧಿಕ ಅವ್ಯವಹಾರ ನಡೆಸಿದರೆ, ಇಲ್ಲಿ ಉಮಿಕಲ್ ಬೆಟ್ಟದ ತುದಿಯಲ್ಲಿ ಪರಶುರಾಮ ಥೀಮ್ ಪಾರ್ಕ್ ಹಾಗೂ ಪರಶುರಾಮನ ಕಂಚಿನ ಮೂರ್ತಿ ಸ್ಥಾಪನೆ ಹೆಸರಿನಲ್ಲಿ ಶಾಸಕರು ಮಾಡಿ ಮಹಾವಂಚನೆ ಯನ್ನು ಜನತೆಗೆ ಮುಟ್ಟಿಸುವ ಕಾರ್ಯ ಮಾಡುತಿದ್ದೇವೆ ಎಂದು ಸೊರಕೆ ಹೇಳಿದರು.

ಶಾಸಕರು ಚುನಾವಣೆ ಗೆಲ್ಲಲು ಮತದಾರರ ಧಾರ್ಮಿಕ ಭಾವನೆ, ಭಕ್ತಿ, ನಂಬಿಕೆಗೆ ಧಕ್ಕೆ ತರುವ ಕೆಲ ಮಾಡಿದ್ದಾರೆ. ರಾಜಕೀಯ ಲಾಭಕ್ಕಾಗಿ ಕಾರ್ಕಳದಲ್ಲಿ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಕಲಿ ಪ್ರತಿಮೆ ಸ್ಥಾಪಿಸಲಾಗಿದೆ. ಈ ಬಗ್ಗೆ ಸರಕಾರ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳ ಬೇಕು ಎಂದರು.

ಧರ್ಮ, ನಂಬಿಕೆಯನ್ನು ಘಾಸಿಗೊಳಿಸಿದ ಅಧಿಕಾರಿಗಳ ವಿರುದ್ಧ ಸಹ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ ಸೊರಕೆ, ಈ ಯೋಜನೆಯಲ್ಲಿ ಅವ್ಯವಹಾರ ನಡೆಸಲು ಸಾಥ್ ನೀಡಿದ ಅಧಿಕಾರಿಗಳ ವಿರುದ್ದ ಕಠಿಣ ಕ್ರಮಕ್ಕೆ ಈಗಾಗಲೇ ಮುಖ್ಯಮಂತ್ರಿಗಳಿ ಗೆ ಮನವಿ ಸಲ್ಲಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಚಿಕ್ಕಮಗಳೂರು ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ ಡಾ. ಅಂಶುಮನ್, ಕಾಂಗ್ರೆಸ್ ಮುಖಂಡರಾದ ವಿಕಾಸ್ ಹೆಗ್ಡೆ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್‌ರಾಜ್ ಕಾಂಚನ್, ಡಿ.ಆರ್ ರಾಜು, ಕಿಶನ್ ಹೆಗ್ಡೆ ಕೊಳ್ಕೆಬೈಲು, ಚಂದ್ರಶೇಖರ ಬಾಯರಿ, ಸದಾಶಿವ ದೇವಾಡಿಗ, ದೀಪಕ್ ಕೋಟ್ಯಾನ್, ಮಹಿಳಾ ಕಾಂಗ್ರೆಸ್ ನಾಯಕಿ ಅನಿತಾ ಡಿಸೋಜ ಉಪಸ್ಥಿತರಿದ್ದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕಕುಮಾರ್ ಕೊಡವೂರು ಸ್ವಾಗತಿಸಿದರೆ, ಶುಭದ ರಾವ್ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

6 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

7 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

7 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

7 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

7 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

8 hours ago