Featured

ಕಾರ್ಕಳ : ಹಿಂದೂ ಕಾರ್ಯಕರ್ತರ ತ್ಯಾಗ ಎಲ್ಲಿ ತನಕ ಇದೆಯೋ ಅಲ್ಲಿಯವರೆಗೂ ಧರ್ಮ, ಸಂಸ್ಕೃತಿ ನಶಿಸಲು ಸಾಧ್ಯವಿಲ್ಲ : ಸಾಧ್ವಿ ಬಾಲಿಕಾ ಸರಸ್ವತಿ

ಹಿಂದೂ ಕಾರ್ಯಕರ್ತರ ತ್ಯಾಗ ಎಲ್ಲಿ ತನಕ ಇದೆಯೋ ಅಲ್ಲಿಯವರೆಗೂ ಧರ್ಮ, ಸಂಸ್ಕೃತಿ ನಶಿಸಲು ಸಾಧ್ಯವಿಲ್ಲ..

ನಮ್ಮೂರೆ ನಮಗೆ ತೀರ್ಥ ಕ್ಷೇತ್ರ ವಾಗಬೇಕು .ಅಗಲೆ ಧರ್ಮದ ಉಳಿಸಲು ಸಾಧ್ಯ..

ಗೋಮಾತೆ ರಾಷ್ಟ್ರಮಾತೆಯಾಗಿ ಘೋಷಣೆಯಾಗಬೇಕು ..

ಲವ್‌ ಜೆಹಾದ್‌, ಮತಾಂತರ, ಗೋಹತ್ಯೆ ತಡೆಗೆ ಕಠಿನ ಕಾನೂನು ಜಾರಿಯಾಗಲಿ..

ಲವ್‌ ಜೆಹಾದ್‌ ತಡೆಗೆ ಪ್ರತಿ ಮನೆಯ ತಾಯಿಯೂ ಝಾನ್ಸಿ ರಾಣಿಯಾಗಬೇಕು..

ಕಾರ್ಕಳ ಬೃಹತ್‌ ಹಿಂದೂ ಸಂಗಮದಲ್ಲಿ ಸಾಧ್ವಿ ಬಾಲಿಕಾ ಸರಸ್ವತಿ ..

ಕಾರ್ಕಳ: ಕಾರ್ಕಳ ವಿಶ್ವ ಹಿಂದೂ ಪರಿಷದ್ ಭಜರಂಗದಳ ಉಡುಪಿ ಇದರ ವತಿಯಿಂದ ಹಿಂದೂ ಸಂಗಮ ಕಾರ್ಯಕ್ರಮ ಕಾರ್ಕಳದ ಗಾಂಧಿ ಮೈದಾನದ ಅಮರ ಸೇನಾನಿ ಜನರಲ್ ಬಿಪಿನ್ ರಾವತ್ ವೇದಿಕೆಯಲ್ಲಿ ನಡೆಯಿತು.

ಹಿಂದೂ ಯುವಕರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಸಾಧ್ವಿ ಬಾಲಿಕಾ ಸರಸ್ವತಿ ಅವರು “ಹಿಂದೂ ಕಾರ್ಯಕರ್ತರ ತ್ಯಾಗ ಎಲ್ಲಿ ತನಕ ಇದೆಯೋ ಅಲ್ಲಿಯವರೆಗೂ ಧರ್ಮ, ಸಂಸ್ಕೃತಿ ನಶಿಸಲು ಸಾಧ್ಯವಿಲ್ಲ . ಟಿಪ್ಪುವನ್ನು ಪೂಜಿಸುವ ಮನಸ್ಸುಗಳನ್ನು ಧಿಕ್ಕರಿಸಬೇಕು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಸಂಸ್ಕೃತಿಯ ಕುರಿತಾದ ಶಿಕ್ಷಣ ಮೊದಲ ಆದ್ಯತೆಯಾಗಬೇಕು” ಎಂದು ಅವರು ಹೇಳಿದರು. ಇದೇ ಸಂಧರ್ಭದಲ್ಲಿ ಕಟ್ಟುನಿಟ್ಟಾದ ಗೋಹತ್ಯೆ ವಿರೋಧಿ ಕಾನೂನು ಮತ್ತು ಮತಾಂತರ ಮತ್ತು ಲವ್ ಜಿಹಾದ್ ವಿರುದ್ಧ ಕಾನೂನನ್ನು ಜಾರಿಗೊಳಿಸಲು ಸರ್ಕಾರವನ್ನು ಅವರು ಒತ್ತಾಯಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಭಾರತೀಯ ಸಂಸ್ಕೃತಿಯ ರಕ್ಷಕರು ಮಾಡಿದ ಉದಾತ್ತ ಕಾರ್ಯದಿಂದಾಗಿ ನಾವು ತಲೆ ಎತ್ತಿ ಬದುಕುತ್ತಿದ್ದೇವೆ. ದೇಶದ ಕಾನೂನಿನ ವ್ಯಾಪ್ತಿಯಲ್ಲಿ ಗೋ ಮಾತೆ ಮತ್ತು ನಮ್ಮ ಧಾರ್ಮಿಕ ಸ್ಥಳಗಳನ್ನು ರಕ್ಷಿಸೋಣ. ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ನಮ್ಮ ಸಂಸ್ಕೃತಿಯನ್ನು ಗೌರವಿಸುವ ಸರ್ಕಾರವನ್ನು ಆಯ್ಕೆ ಮಾಡೋಣ ಎಂದರು.

ಗೌರಿ ಗದ್ದೆ ದತ್ತಾಶ್ರಮದ ವಿನಯ್ ಗುರೂಜಿ ಅವರು ಬಜರಂಗದಳ ಕಾರ್ಯಕರ್ತರ ಮೇಲಿನ ಪ್ರಕರಣಗಳ ಹೋರಾಟಕ್ಕಾಗಿ ಆರಂಭಿಸಿರುವ ದತ್ತಿ ನಿಧಿಗೆ 50,000 ರೂಪಾಯಿಗಳನ್ನು ಘೋಷಿಸಿದರು. ದೇಹವನ್ನು ಶಿಲೆಯಾಗಿ ನಾಮಧೇಯವಾಗಿ , ಧರ್ಮದ ವಿರುದ್ದ ಮಾತನಾಡುವುದು ಧರ್ಮಯುದ್ದವಾದೃ ಕೇಸರಿ ಸನಾತನ ಧರ್ಮ ಹೊಂದಿರುವ ಸಂಕೇತ , ಸೃಷ್ಟಿ ಸರಿದೂಗಲು ಹಿಂದೂ ಧರ್ಮ ಉಳಿಯಲು , ಧರ್ಮ ಪ್ರಜ್ಞೆ ನಿಡುವ ಪ್ರವೃತ್ತಿ ಬಾಲ್ಯದಲ್ಲೇ ಅಗಬೇಕು. ನಾಮ ಭಜನೆ ,ರಾಮ ಭಜನೆಯಾಗಲಿ , ಕಲಿ ಕಲ್ಮಶ ತೊಳೆಯುವ ಕಾರ್ಕಳ ವಾಗಲಿ, ನಮ್ಮೂರೆ ನಮಗೆ ತೀರ್ಥ ಕ್ಷೇತ್ರ ವಾಗಬೇಕು .ಅಗಲೆ ಧರ್ಮದ ಉಳಿಸಲು ಸಾಧ್ಯ ಎಂದರು.

ಸಮಾವೇಶಕ್ಕೂ ಮುನ್ನ ಕಾರ್ಕಳದ ಸ್ವರಾಜ್ ಮೈದಾನದಿಂದ ಗಾಂಧಿ ಮೈದಾನದ ವರೆಗೆ ವೈಭವದ ಶೋಭಾಯಾತ್ರೆ ನಡೆಯಿತು .ಸಮಾವೇಶದಲ್ಲಿ ಬಜರಂಗದಳದ ಪ್ರಮುಖರು ಉಪಸ್ಥಿತರಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

7 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

7 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

7 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

11 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

11 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

11 hours ago