Featured

ಕಾರ್ಕಳ : 5 ವರುಷಕ್ಕೊಮ್ಮೆ ಜನರ ಮನೆಬಾಗಿಲಿಗೆ ಬರುವ ಕಾಂಗ್ರೆಸ್ಸನ್ನು ಕ್ಷೇತ್ರದ ಜನ ತಿರಸ್ಕರಿಸಬೇಕು : ಸುನಿಲ್ ಕುಮಾರ್  – Vishwanews24

ಕಾರ್ಕಳ : 5 ವರುಷಕ್ಕೊಮ್ಮೆ ಜನರ ಮನೆಬಾಗಿಲಿಗೆ ಬರುವ ಕಾಂಗ್ರೆಸ್ಸನ್ನು ಕ್ಷೇತ್ರದ ಜನ ತಿರಸ್ಕರಿಸಬೇಕು : ಸುನಿಲ್ ಕುಮಾರ್

ಕಾರ್ಕಳ :ಕೊರೊನಾ, ಪ್ರಾಕೃತಿಕ ಅವಘಡ ಸಂಭವಿಸಿ ಕ್ಷೇತ್ರದ ಜನ ಸಂಕಷ್ಟಕ್ಕೆ ಒಳಗಾಗಿ ನೋವಿನಲ್ಲಿದ್ದ ವೇಳೆ ಗುಹೆ ಸೇರಿಕೊಂಡಿದ್ದ ಕಾಂಗ್ರೆಸ್ ಈಗ ಚುನಾವಣೆ ವೇಳೆ ಯಾವ ಮುಖ ಹೊತ್ತುಕೊಂಡು ಜನರ ಬಳಿಗೆ ಹೋಗಿ ಮತ ಯಾಚಿಸುತ್ತಿದೆ? 5 ವರುಷಕ್ಕೊಮ್ಮೆ ಜನರ ಮನೆಬಾಗಿಲಿಗೆ ಬರುವ ಕಾಂಗ್ರೆಸ್ಸನ್ನು ಕ್ಷೇತ್ರದ ಜನ ತಿರಸ್ಕರಿಸಬೇಕು ಎಂದು ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ ಕರೆ ನೀಡಿದರು.

ಕಾರ್ಕಳ ವಿಧಾನ ಸಭಾ ಕ್ಷೇತ್ರದ ಹಿರ್ಗಾನದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಾಲಯ ಉದ್ಘಾಟಿಸಿ ಅವರು ಮಾತನಾಡಿದರು. ಜನರ ಕಷ್ಟ- ಕಾರ್ಪಣ್ಯ ನೋವುಗಳಲ್ಲಿ ಬಿಜೆಪಿ ಜನರ ಜತೆ ನಿರಂತರವಾಗಿ ನಿಂತಿದೆ. ಜನಸಾಮಾನ್ಯರು ನಿತ್ಯ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಅವರಿದ್ದ ಸ್ಥಳಕ್ಕೆ ತೆರಳಿ ಸಮಸ್ಯೆ ಆಲಿಸಿ ಅವರ ಕಷ್ಟಗಳನ್ನು ಪರಿಹರಿಸಿದ್ದೇವೆ. ಪ್ರತಿ ಹಳ್ಳಿಯ ಕಟ್ಟ ಕಡೆಯ ನಿವಾಸಿಯ ಕುಟುಂಬಕ್ಕೆ ಬಿಜೆಪಿ ಸ್ಪಂದಿಸಿದೆ. ಇತರೆಲ್ಲ ಸಮಯಗಳಲ್ಲಿ ಸ್ಪಂದಿಸುವುದು ಇದ್ದಿದ್ದೆ, ಆದರೆ ಕೊರೊನಾ ಬಂದು ಜನ ನೋವಿನಲ್ಲಿರುವಾಗ ಅವರ ಬಳಿ ತೆರಳಿ ವೈದ್ಯಕೀಯ ಸೇವೆ, ಆರೋಗ್ಯ ತಪಾಸಣೆ, ಕಿಟ್ ನೀಡಿದಲ್ಲದೆ ನಾಗರಿಕರ ಆರೋಗ್ಯ, ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ಹೆಚ್ಚಿನ ಹಾನಿ ಸಂಭವಿಸದಂತೆ ತಡೆದು ಕ್ರಮ ಕೈಗೊಂಡಿದ್ದೇವೆ.

ಮುಂಬಯಿ, ಪೂನಾದಲ್ಲಿರುವ ನಮ್ಮ‌ ಸ್ನೇಹಿತರು ಮರಳಿ ಕ್ಷೇತ್ರಕ್ಕೆ ಬಂದಾಗ ಅವರಿಗೆ ಯಾವುದೇ ತೊಂದರೆ ಆಗದಂತೆ ಕ್ವಾರಂಟೈನ್ ಸ್ಥಾಪಿಸಿ, ವ್ಯವಸ್ಥೆ ಕಲ್ಲಿಸಿದ್ದೇವೆ. ಆಗ ಇದೇ ಕಾಂಗ್ರೆಸ್ಸಿಗರು ಎಲ್ಲಿ ಅಡಗಿ ಕುಳಿತಿದ್ದರು ಎಂದು ಪ್ರಶ್ನಿಸಿರುವ ಅವರು 5 ವರುಷ ಜನಸಾಮಾನ್ಯರ ಕಡೆ ತಿರುಗಿಯು ನೋಡದವರು ಈಗ ಚುನಾವಣೆ ಹೊತ್ತಲ್ಲಿ ನಾನಾ ಭರವಸೆ, ಗ್ಯಾರಂಟಿ ಕಾರ್ಡ್ ಗಳನ್ನು ಹಿಡಿದುಕೊಂಡು ವಿವಿಧ ಮುಖವಾಡ ಹೊತ್ತು ಜನರ ಮನೆ ಬಾಗಿಲಿಗೆ ಬಂದು ಭರವಸೆಗಳನ್ನು ನೀಡುತ್ತಿದ್ದಾರೆ.

ಇಷ್ಟು ದಿನವೂ ಒಮ್ಮೆಯು ಕ್ಷೇತ್ರದ ಕಡೆ ತಿರುಗಿ ನೋಡದವರಿಗೆ ಈಗ ಜನರ ನೆನಪಾಗಿರುವುದು ಹಾಸ್ಯಾಸ್ಪದ ಎಂದು ಹೇಳಿದರು. ಕ್ಷೇತ್ರದ ಜನ ಸಮಸ್ಯೆಗೆ ಒಳಗಾದಗ, ಮೂಲಭೂತ ಸೌಕರ್ಯ ಕೇಳಿ ಬಂದಾಗ ಯಾವುದೇ ಜಾತಿ, ಧರ್ಮ ಎಂಬ ತಾರತಮ್ಯ ಮಾಡದೆ ಎಲ್ಲರಿಗೂ ಸಮಾನ ನ್ಯಾಯ ನೀಡಿದ್ದೇವೆ. ಇದನ್ನು ಕ್ಷೇತ್ರದ ಮತದಾರರು ಖಂಡಿತ ಅರ್ಥ ಮಾಡಿಕೊಳ್ಳುತ್ತಾರೆ.

ಈ ಚುನಾವಣೆಯಲ್ಲಿ ಅಪಪ್ರಚಾರ ನಡೆಸುವವರನ್ನು, 5 ವರುಷಕ್ಕೆ ಒಮ್ಮೆ ಮನೆಗಳಿಗೆ ಬರುವವರನ್ನು ತಿರಸ್ಕರಿಸಿ ಜನರ ಜತೆಗೆ ಸದಾ ಕಾಲವು ಇದ್ದ ಬಿಜೆಪಿ ಶಾಸಕನಾದ ನನ್ನನ್ನು ಬೆಂಬಲಿಸುವಂತೆ ಅವರು ಮನವಿ ಮಾಡಿದರು. ಪ್ರಮುಖರಾದ ಸಂತೋಷ್ ಶೆಟ್ಟಿ, ಶಂಭು ಹೆಗ್ಡೆ, ಹರಿಶ್ಚಂದ್ರ ಕುಲಾಲ್ ಸಹಿತ ಅನೇಕ ಮಂದಿ ಗಣ್ಯರು, ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago