Featured

ಕಾರ್ಗಿಲ್ ವಿಜಯೋತ್ಸವ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಿಂದ ಎರಡು ಸೇತುವೆ ಲೋಕಾರ್ಪಣೆ -Vishwanews24

ನವದೆಹಲಿ:  ಕಾರ್ಗಿಲ್  ವಿಜಯೋತ್ಸವದ ಅಂಗವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಮ್ಮು ಕಾಶ್ಮೀರದ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ್ದು, ಇದೇ ವೇಳೆ ಪರ್ವತಗಳಿಗೆ ಸಂಪರ್ಕ ಕಲ್ಪಿಸುವ ಎರಡು ಸೇತುವೆಗಳನ್ನು ಉದ್ಘಾಟಿಸಲಿದ್ದಾರೆ.

ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ಕಥುವಾ ಜಿಲ್ಲೆಯ ಉಝ್ ಹಾಗೂ ಸಂಬ ಜಿಲ್ಲೆಯ ಬಸಂತರ್‍ನಲ್ಲಿ ನಿರ್ಮಾಣವಾಗಿರುವ ಎರಡು ಸೇತುವೆಗಳನ್ನು ಸಿಂಗ್ ದೇಶಕ್ಕೆ ಸಮರ್ಪಿಸುವವರಿದ್ದಾರೆ. ಇದರಲ್ಲಿ . ಉಝ್ ಸೇತುವೆ ಒಂದು ಕಿಲೋಮೀಟರ್ ಉದ್ದ ಮತ್ತು ಬಸಂತರ್ ಸೇತುವೆ 617.4 ಮೀಟರ್ ಉದ್ದವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆಪರೇಷನ್ ವಿಜಯ್‍ನ 20ನೇ ವರ್ಷಾಚರಣೆ ಹಿನ್ನೆಲೆ ಶನಿವಾರ ಜಮ್ಮು ಕಾಶ್ಮೀರದಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ರಾಜನಾಥ್ ಸಿಂಗ್ ಗೌರವ ಸಲ್ಲಿಸಿದರು. 1999ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಪಾಕ್ ಸೈನಿಕರು ಹಾಗೂ ಉಗ್ರರ ಒಳನುಸುಳುವಿಕೆ ವಿರುದ್ಧ ನಡೆದ ಯುದ್ಧದಲ್ಲಿ ಭಾರತ ಜಯಗಳಿಸಿತ್ತು..

ವಿಜಯ ದಿನವನ್ನು ಭಾರತೀಯ ಸೇನೆ ವಿಜೃಂಭಣೆಯಿಂದ ಆಚರಿಸುತ್ತಿದ್ದು, ಈ ಮೂಲಕ ಆಪರೇಷನ್ ವಿಜಯ್‍ನಲ್ಲಿ ಭಾಗವಹಿಸಿದ ಯೋಧರಿಗೆ ನಮನ ಸಲ್ಲಿಸಲಾಗುತ್ತಿದೆ. ಆಪರೇಷನ್ ವಿಜಯ್‍ನ್ನು ‘ರಿಮೆಂಬರ್, ರೀಜಾಯ್ಸ್ ಆಂಡ್ ರಿನ್ಯೂ(ನೆನಪಿಡಿ, ಹೆಮ್ಮೆಪಡಿ ಮತ್ತು ನವೀಕರಿಸಿ)’ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಅಲ್ಲದೆ, ಸೈನ್ಯದ ಮೂರು ಬೆಟಾಲಿಯನ್‍ಗಳು ಅಸಾಧ್ಯವಾಗದ ಸ್ಥಿಯಲ್ಲಿ ಹೋರಾಡಿದ ಶಿಖರಗಳಿಗೆ ದಂಡಯಾತ್ರೆ ಕೈಗೊಳ್ಳುತ್ತಿವೆ.

 

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

14 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

14 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

15 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

15 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

15 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

16 hours ago