ನವದೆಹಲಿ: ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಮ್ಮು ಕಾಶ್ಮೀರದ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ್ದು, ಇದೇ ವೇಳೆ ಪರ್ವತಗಳಿಗೆ ಸಂಪರ್ಕ ಕಲ್ಪಿಸುವ ಎರಡು ಸೇತುವೆಗಳನ್ನು ಉದ್ಘಾಟಿಸಲಿದ್ದಾರೆ.
ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ಕಥುವಾ ಜಿಲ್ಲೆಯ ಉಝ್ ಹಾಗೂ ಸಂಬ ಜಿಲ್ಲೆಯ ಬಸಂತರ್ನಲ್ಲಿ ನಿರ್ಮಾಣವಾಗಿರುವ ಎರಡು ಸೇತುವೆಗಳನ್ನು ಸಿಂಗ್ ದೇಶಕ್ಕೆ ಸಮರ್ಪಿಸುವವರಿದ್ದಾರೆ. ಇದರಲ್ಲಿ . ಉಝ್ ಸೇತುವೆ ಒಂದು ಕಿಲೋಮೀಟರ್ ಉದ್ದ ಮತ್ತು ಬಸಂತರ್ ಸೇತುವೆ 617.4 ಮೀಟರ್ ಉದ್ದವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಆಪರೇಷನ್ ವಿಜಯ್ನ 20ನೇ ವರ್ಷಾಚರಣೆ ಹಿನ್ನೆಲೆ ಶನಿವಾರ ಜಮ್ಮು ಕಾಶ್ಮೀರದಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ರಾಜನಾಥ್ ಸಿಂಗ್ ಗೌರವ ಸಲ್ಲಿಸಿದರು. 1999ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಪಾಕ್ ಸೈನಿಕರು ಹಾಗೂ ಉಗ್ರರ ಒಳನುಸುಳುವಿಕೆ ವಿರುದ್ಧ ನಡೆದ ಯುದ್ಧದಲ್ಲಿ ಭಾರತ ಜಯಗಳಿಸಿತ್ತು..
ವಿಜಯ ದಿನವನ್ನು ಭಾರತೀಯ ಸೇನೆ ವಿಜೃಂಭಣೆಯಿಂದ ಆಚರಿಸುತ್ತಿದ್ದು, ಈ ಮೂಲಕ ಆಪರೇಷನ್ ವಿಜಯ್ನಲ್ಲಿ ಭಾಗವಹಿಸಿದ ಯೋಧರಿಗೆ ನಮನ ಸಲ್ಲಿಸಲಾಗುತ್ತಿದೆ. ಆಪರೇಷನ್ ವಿಜಯ್ನ್ನು ‘ರಿಮೆಂಬರ್, ರೀಜಾಯ್ಸ್ ಆಂಡ್ ರಿನ್ಯೂ(ನೆನಪಿಡಿ, ಹೆಮ್ಮೆಪಡಿ ಮತ್ತು ನವೀಕರಿಸಿ)’ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಅಲ್ಲದೆ, ಸೈನ್ಯದ ಮೂರು ಬೆಟಾಲಿಯನ್ಗಳು ಅಸಾಧ್ಯವಾಗದ ಸ್ಥಿಯಲ್ಲಿ ಹೋರಾಡಿದ ಶಿಖರಗಳಿಗೆ ದಂಡಯಾತ್ರೆ ಕೈಗೊಳ್ಳುತ್ತಿವೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…