Featured

ಕಾರ್ಗಿಲ್ ವಿಜಯ್ ದಿವಸ್ ; ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧ ಗೆದ್ದು ಇಂದಿಗೆ 23 ವರ್ಷ – Vishwanews24

ಕಾರ್ಗಿಲ್ ವಿಜಯ್ ದಿವಸ್ ; ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧ ಗೆದ್ದು ಇಂದಿಗೆ 23 ವರ್ಷ

ಪ್ರತಿ ವರ್ಷ ಜುಲೈ 26 ಅನ್ನು ಕಾರ್ಗಿಲ್ ವಿಜಯ್ ದಿವಸ್ ಎಂದು ಆಚರಿಸಲಾಗುತ್ತದೆ. ಕಾರ್ಗಿಲ್ ಯುದ್ಧ ನಡೆದು ಇಂದಿಗೆ 23 ವರ್ಷಗಳು ಕಳೆದಿದೆ. ಆದರೆ ಯೋಧರು ಮಾತ್ರವಲ್ಲದೆ, ಭಾರತೀಯ ಸೇನೆಯ ಜೊತೆಗೆ ಜಮ್ಮು ಮತ್ತು ಕಾಶ್ಮೀರದ ದ್ರಾಸ್ ಕಣಿವೆಯ ಜನರು ಈ ಯುದ್ಧದಲ್ಲಿ ಪ್ರಮುಖ ಪಾತ್ರ ವಹಿಸಿ ಪಾಕಿಸ್ತಾನಕ್ಕೆ ಪಾಠ ಕಲಿಸಲು ಸಹಾಯ ಮಾಡಿದ್ದರ ಬಗ್ಗೆ ನಿಮಗೆ ತಿಳಿದಿದೆಯೇ. ಇದೇ ಜನರನ್ನು ನಾವು ನಾಗರಿಕ ಸೈನಿಕರು ಎಂದು ಕರೆಯುತ್ತೇವೆ. ಹೀಗೆಂದರೆ ಖಂಡಿತವಾಗಿಯೂ ತಪ್ಪಾಗಲ್ಲ. ಭಾರತೀಯ ಸೇನೆಯೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಹೋರಾಡಿದ ಅಂತಹ ಇಬ್ಬರು ನಾಗರಿಕ ಸೈನಿಕರನ್ನು ಇಂದು ನಾವು ನಿಮಗೆ ಪರಿಚಯಿಸುತ್ತಿದ್ದೇವೆ. ಯೋಧರಂತೆ ಶಸ್ತ್ರಾಸ್ತ್ರಗಳನ್ನು ಹಾರಿಸದಿದ್ದರೂ, ಯುದ್ಧದಲ್ಲಿ ಅವರ ಪಾತ್ರ ಮಾತ್ರ ಯಾವ ಸೈನಿಕರಿಗೂ ಕಡಿಮೆ ಇರಲಿಲ್ಲ.

ಪಾಕಿಸ್ತಾನವು ಭಾರತ ಸೇನೆಯ ಗಮನಕ್ಕೆ ಬರದಂತೆ ರಹಸ್ಯವಾಗಿ ತನ್ನ 5000 ಸೈನಿಕರನ್ನು ಗಡಿಯೊಳಗೆ ನುಗ್ಗಿಸಿತ್ತು. ಇದಕ್ಕೆ ಪಾಕ್‌ನ ಅಂದಿನ ಸೇನಾ ಮುಖ್ಯಸ್ಥ ಪರ್ವೇಜ್‌ ಮುಷರ್ರಫ್‌ ಕುಮ್ಮಕ್ಕು ನೀಡಿದ್ದರು. ಪಾಕ್‌ ಪಡೆಗಳು ದೇಶದ ಗಡಿಯೊಳಗೆ ನುಗ್ಗಿರುವ ಸುಳಿವನ್ನು ಸ್ಥಳೀಯ ಕುರಿಗಾಹಿಗಳು ಭಾರತೀಯ ಸೈನಿಕರಿಗೆ ನೀಡಿದರು. ಈ ಹಿನ್ನೆಲೆಯಲ್ಲಿ ಭಾರತ 5 ಯೋಧರನ್ನು ಗಸ್ತಿಗಾಗಿ ಕಳುಹಿಸಿದಾಗ, ಪಾಕ್‌ ಐವರನ್ನೂ ನಿಷ್ಕರುಣೆಯಿಂದ ಕೊಂದು ಹಾಕಿತು. ಇದರಿಂದ ಕೆರಳಿದ ಭಾರತ ಸರ್ಕಾರ, ಕೂಡಲೇ ಪಾಕಿಸ್ತಾನಿ ನುಸುಳುಕೋರರನ್ನು ದೇಶದ ಸೀಮೆಯಿಂದ ಹೊರಗಟ್ಟಲು 20,000 ಯೋಧರನ್ನು ಸಜ್ಜುಗೊಳಿಸಿತು. ಈ ಕಾರ್ಯಾಚರಣೆಗೆ ‘ಆಪರೇಶನ್‌ ವಿಜಯ್‌’ ಎಂದು ಹೆಸರಿಡಲಾಯಿತು.

ಇದನ್ನೂ ಓದಿ : ಈ ರಾಶಿಯವರು ಇಂದು ಕುಟುಂಬದವರೊಂದಿಗೆ ಆನಂದವಾಗಿ ಕಾಲ ಕಳೆಯಲಿದ್ದೀರಿ : ನೋಡಿ ಇಂದಿನ ದಿನ ಭವಿಷ್ಯ -Vishwanews24 

1999ನೇ ಇಸವಿಯ ಜಿಲೈ 26ರಂದು ಭಾರತೀಯ ಸೈನಿಕರು ಅಪರೇಶನ್ ವಿಜಯ್ ಮೂಲಕ ಕಾರ್ಗಿಲ್‌-ಡ್ರಾಸ್‌ ವಲಯದಲ್ಲಿ ಪ್ರದರ್ಶಿಸಿದ ಶೌರ್ಯದ ನೆನಪಿಗಾಗಿ ಈ ದಿನವನ್ನು ಈ ದಿನವನ್ನು ಕಾರ್ಗಿಲ್ ವಿಜಯ ದಿವಸ್ ಎಂದು ಆಚರಿಸಲಾಗುತ್ತದೆ. ಕಾರ್ಗಿಲ್ ಯುದ್ಧದಲ್ಲಿ ಭಾರತ ವಿಜಯ ಪತಾಕೆಯನ್ನು ಹಾರಿಸಿ 23 ವರ್ಷ ತುಂಬುತ್ತದೆ. ಯುದ್ಧದಲ್ಲಿ ಹುತಾತ್ಮರಾದ ಸೈನಿಕರನ್ನು ಸ್ಮರಿಸಲು ದೇಶವು ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್‌ ಆಚರಿಸಲಾಗುತ್ತದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

13 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

14 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

14 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

14 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

14 hours ago