ಧಾರವಾಡ: ‘ರೈತರು ಹಾಗೂ ಗ್ರಾಹಕರಿಗೆ ಸಿಗಬೇಕಾದ ಆಹಾರ ಧಾನ್ಯಗಳನ್ನು ತಮ್ಮ ಖಾಸಗಿ ಗೋದಾಮಿನಲ್ಲಿಟ್ಟು ಕಾರ್ಪೊರೇಟ್ ಕುಳಗಳು ಹಸಿವನ್ನು ಮಾರಾಟ ಮಾಡಲು ಹೊರಟಿವೆ. ಇದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರ ಕಾನೂನು ಜಾರಿಗೆ ತರುವ ಮೂಲಕ ನೀಡುತ್ತಿರುವ ಸಹಕಾರದ ವಿರುದ್ಧ ಹೋರಾಟ ಆರಂಭವಾಗಿದೆ’ ಎಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಟಿಕಾಯತ್ ಹೇಳಿದರು.
ವಿವಿಧ ಕೃಷಿ ಹಾಗೂ ಸಾಮಾಜಿಕ ಹೋರಾಟ ಸಂಘಟನೆಗಳು ಇಲ್ಲಿನ ಕಡಪಾ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ಬಹಿರಂಗ ಸಮಾವೇಶದಲ್ಲಿ ಅವರು ಮಾತನಾಡಿದರು.
‘ಸದ್ಯಕ್ಕೆ ರೈತ ವಿರೋಧಿ ಮೂರು ಕಾನೂನುಗಳನ್ನು ಸರ್ಕಾರ ಜಾರಿಗೆ ತಂದಿದೆ. ಮುಂದಿನ ದಿನಗಳಲ್ಲಿ ವಿದ್ಯುತ್ ಕಾಯ್ದೆ ಹಾಗೂ ಬೀಜದ ಕಾಯ್ದೆಯನ್ನು ತರಲಿದೆ. ಇವುಗಳ ಮೂಲಕ ಕಾರ್ಪೊರೇಟ್ ಕಂಪನಿಗಳಿಗೆ ರೈತರನ್ನು ಜೀತದಾಳುಗಳನ್ನಾಗಿಸಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ಸಿದ್ಧತೆ ನಡೆಸಿದೆ. ಇದರ ವಿರುದ್ಧ 125 ದಿನಗಳಿಂದ ದೆಹಲಿಯ ಹೊರವಲಯದಲ್ಲಿ ಹೋರಾಟ ನಡೆದಿದೆ. ದೇಶದ ಯುವ ಜನತೆ ಈಗ ಎಚ್ಚೆತ್ತುಕೊಳ್ಳದಿದ್ದರೆ ಮುಂದೊಂದು ದಿನ ಜಮೀನು ಕಳೆದುಕೊಂಡು ಪರಿತಪಿಸಬೇಕಾಗಬಹುದು’ ಎಂದು ಎಚ್ಚರಿಸಿದರು.
ಇದನ್ನೂ ಓದಿ :ತಂದೆ-ತಾಯಿ ಆರಾಮಗಿದ್ದಾರೆ. ಆತಂಕ ಪಡುವ ಆಗತ್ಯವಿಲ್ಲ : ಹೆಚ್. ಡಿ ಕುಮಾರಸ್ವಾಮಿ -Vishwanews24
‘ಮಂಡಿ ಹೊರಗೆ ಬೆಳೆಗಳನ್ನು ಮಾರಾಟ ಮಾಡಬಹುದು ಎಂದು ಇವರು ಹೇಳುತ್ತಿದ್ದಾರೆ. ಈಗಾಗಲೇ ಮಧ್ಯಪ್ರದೇಶ ಹಾಗೂ ಇನ್ನಿತರ ಉತ್ತರ ಭಾರತ ರಾಜ್ಯಗಳಲ್ಲಿ ಮಂಡಿ ಹೊರಗೆ ಮಾರಾಟ ಮಾಡಿದ ರೈತರನ್ನು ಕೆಲವರು ವಂಚಿಸಿದ ಉದಾಹರಣೆಗಳಿವೆ. ರೈತರ ಪರ ಕಾನೂನು ಎನ್ನುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಈ ಕುರಿತು ಎಲ್ಲಿಯೂ ಮಾತನ್ನಾಡದಿರುವುದು ಇವರ ಷಡ್ಯಂತ್ರವನ್ನು ತಿಳಿಸುತ್ತದೆ’ ಎಂದರು.
‘2021 ಆಂದೋಲನದ ವರ್ಷವಾಗಿದ್ದು, ಈ ವರ್ಷದ ಅಂತ್ಯದ ವರೆಗೂ ಈ ಹೋರಾಟ ಮುಂದುವರೆಯಲಿದೆ. ನಂತರದ ಹೋರಾಟದ ರೂಪುರೇಷೆ ಕುರಿತು ಮುಂದೆ ತಿಳಿಸಲಾಗುವುದು. ಇದಕ್ಕಾಗಿ ದೆಹಲಿಯ ಹೊರವಲಯದಲ್ಲಿ ಮನೆಗಳು ನಿರ್ಮಾಣವಾಗಿವೆ. ನೀರು, ಶೌಚಾಲಯ, ವಿದ್ಯುತ್ ಪ್ರತಿಯೊಂದರ ವ್ಯವಸ್ಥೆಯೂ ಆಗಿದೆ. ಪ್ರತಿ ಗ್ರಾಮದಿಂದ ಒಂದು ಟ್ರ್ಯಾಕ್ಟರ್ನೊಂದಿಗೆ 15 ಜನರು ಹತ್ತು ದಿನಗಳ ಕಾಲ ಈ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ಇದೊಂದು ಸುದೀರ್ಘ ಹೋರಾಟವಾಗಿರುವುದರಿಂದ ರೈತರು, ಕಾರ್ಮಿಕರು ಸಜ್ಜಾಗಬೇಕು. ಇಲ್ಲಿ ಜಾತಿ ಹಾಗೂ ಧರ್ಮವನ್ನೂ ಮೀರಿ ರೈತಧರ್ಮವೇ ಶ್ರೇಷ್ಠ ಎಂಬ ಭಾವನೆ ಎಲ್ಲರಲ್ಲೂ ಇರಬೇಕು’ ಎಂದು ಟಿಕಾಯತ್ ಹೇಳಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…