Featured

ಕಾರ್ಮಿಕರ ಹಿತರಕ್ಷಣೆಗೆ ಬಿಜೆಪಿ ಸರಕಾರ ಬದ್ಧ: ಯಶ್ಪಾಲ್ ಸುವರ್ಣ – Vishwanews24

ಕಾರ್ಮಿಕರ ಹಿತರಕ್ಷಣೆಗೆ ಬಿಜೆಪಿ ಸರಕಾರ ಬದ್ಧ: ಯಶ್ಪಾಲ್ ಸುವರ್ಣ

ಉಡುಪಿ: ಕಾರ್ಮಿಕ ವರ್ಗದ ಶ್ರಮದ ಫಲವಾಗಿ ಇಂದು ಬೃಹತ್ ಕೈಗಾರಿಕೆಗಳು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ ದೇಶದ ಆರ್ಥಿಕತೆಗೆ ಶಕ್ತಿ ತುಂಬುತ್ತಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಕಾರ್ಮಿಕರ ಏಳಿಗೆಗಾಗಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಕಾರ್ಮಿಕ ವರ್ಗದ ಹಿತರಕ್ಷಣೆಗೆ ಬಿಜೆಪಿ ಸರ್ಕಾರ ಬದ್ಧತೆ ಮೆರೆದಿದೆ.

ಉಡುಪಿ ಕ್ಷೇತ್ರದಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಪ್ರೋತ್ಸಾಹ ನೀಡಿ ಉದ್ಯೋಗ ಸೃಷ್ಟಿಸುವುದಾಗಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಹೇಳಿದರು.

ಮಣಿಪಾಲ ಭಾಗದ ವಿವಿಧ ಗಾರ್ಮೆಂಟ್ಸ್ ಹಾಗೂ ಕೈಗಾರಿಕಾ ಘಟಕಗಳಿಗೆ ಶಾಸಕ ರಘುಪತಿ ಭಟ್ ರವರೊಂದಿಗೆ ಭೇಟಿ ನೀಡಿ ಕಾರ್ಮಿಕರಲ್ಲಿ ಮತ ಯಾಚನೆ ಮಾಡಿದರು.

ಶಾಸಕ ರಘುಪತಿ ಭಟ್ ಮಾತನಾಡಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ರನ್ನು ಗೆಲ್ಲಿಸಿ ಬಿಜೆಪಿ ಸರ್ಕಾರದ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಕೈ ಕೊಡಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯರಾದ ಮಂಜುನಾಥ್‌ ಮಣಿಪಾಲ್‌ ,ಕಲ್ಪನಾ‌ ಸುಧಾಮ, ಮಾಜಿ ನಗರಸಭಾ ಸದಸ್ಯ ನರಸಿಂಹ ನಾಯಕ್ ,ಡಾ ಬಾಲಕೃಷ್ಣ ಮದ್ದೋಡಿ, ಸತೀಶ್ ಸಾಲ್ಯಾನ್ ,ಆಲ್ವಿನ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

14 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

23 minutes ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

30 minutes ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

37 minutes ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

50 minutes ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

1 hour ago