ಬೆಂಗಳೂರು : ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ ವಿರೋಧಿಸಿ ಸಾರಿಗೆ ಇಲಾಖೆ ಕಾರ್ಮಿಕ ಸಂಘಟನೆಗಳು ಮಂಗಳವಾರ ಹಾಗೂ ಬುಧವಾರ ಎರಡು ದಿನ ಕೇಂದ್ರ ಸರ್ಕಾರದ ವಿರುದ್ಧ ಭಾರತ್ ಬಂದ್ ಗೆ ಕರೆ ನೀಡಿದೆ.
ಜನವರಿ 8 ಹಾಗೂ 9 ರಂದು ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿದೆ. ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಬುಧವಾರ ಸಂಜೆ 5 ಗಂಟೆಯವರಗೆ ಬಂದ್ ನಡೆಯಲಿದೆ.
ಬಂದ್ ದಿನ ಬಿಎಂಟಿಸಿ, ಕೆಎಸ್ಆರ್ ಟಿಸಿ ಬಸ್ ಸೇವೆ ಇರಲ್ಲ, ಆಟೋ ಓಲಾ ಕ್ಯಾಬ್ ಕೂಡ ಬಂದ್ ಗೆ ಬೆಂಬಲ ಸೂಚಿಸಿದೆ. ಸೇರಿದಂತೆ ನಾಲ್ಕು ಸಾರಿಗೆ ನಿಗಮದ ಬಸ್ ಇರಲ್ಲ, ಆಟೋ, ಓಲಾ ಮತ್ತು ಜೊತೆಗೆ ಮುಷ್ಕರದಲ್ಲಿ ಬ್ಯಾಂಕ್ ನೌಕರರು ಪಾಲ್ಗೊಳ್ಳಲಿದ್ದು, ಬ್ಯಾಂಕ್ ಸೇವೆಗಳಲ್ಲೂ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಆಸ್ಪತ್ರೆ. ಮೆಡಿಕಲ್. ಶಾಪ್ ಅಂಗಡಿ ಮುಗ್ಗಟ್ಟುಗಳು ಇರುತ್ತದೆ. ಜೊತೆಗೆ ಆಯಂಬುಲೆನ್ಸ್ ಸೇವೆ, ಮೆಟ್ರೋ ಇರಲಿದೆ. ಇನ್ನೂ ಶಾಲೆ ಕಾಲೇಜುಗಳಿಗೆ ರಜೆ ನೀಡುವ ಬಗ್ಗೆ ಆಯಾಯ ಜಿಲ್ಲಾಧಿಕಾರಿಗಳು ತೀರ್ಮಾನ ತೆಗೆದುಕೊಳ್ಳಲಿದ್ದಾರೆ.
ಕೆಲ ಟ್ಯಾಕ್ಸಿ ಮತ್ತು ಆಟೋ ಸಂಘಟನೆಗಳು ಬಂದ್ ಗೆ ಕೇವಲ ನೈತಿಕ ಬೆಂಬಲ ವ್ಯಕ್ತಪಡಿಸಿದ್ದು, ಕೆಲ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿದ್ದರೂ ಮತ್ತೆ ಕೆಲವು ಸಂಘಟನೆಗಳು ನೈತಿಕ ಬೆಂಬಲ ಮಾತ್ರ ಘೋಷಣೆ ಮಾಡಿವೆ. ಟ್ಯಾಕ್ಸಿ ಮತ್ತು ಆಟೋ ಸೇವೆ ಎಂದಿನಂತೆ ಇರಲಿವೆ ಎಂದು ಘೋಷಣೆ ಮಾಡಿವೆ. ಹೀಗಾಗಿ ಆಟೋ ಮತ್ತು ಟ್ಯಾಕ್ಸಿ ಸೇವೆ ಸಂಪೂರ್ಣ ಬಂದ್ ಆಗಿದಿದ್ದರೂ ಸಂಚಾರ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
12 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಎಐಟಿಯುಸಿ, ಸಿಐಟಿಯು, ಐಎನ್ ಟಿಯುಸಿ, ಎಲ್ ಪಿಎಫ್ ಕಾರ್ಮಿಕ ಸಂಘಟನೆಗಳು ಜನವರಿ 8 ಹಾಗೂ 9 ರಂದು ಭಾರತ್ ಬಂದ್ ಗೆ ಕರೆ ಕೊಟ್ಟಿದೆ.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…