ಬೆಂಗಳೂರು : ನಾನು ಒಬ್ಬ ವರ್ಕರ್. ಅಧ್ಯಕ್ಷನಾದಾಗಲೂ ಪಕ್ಷದ ಬಾವುಟ ಕಟ್ಟಿದ್ದೇನೆ. ಕಾರ್ಯಕರ್ತನಾದಾಗಲೂ ಬಾವುಟ ಕಟ್ಟಿದ್ದೇನೆ ಕೇವಲ ವೇದಿಕೆಯಲ್ಲಿ ಕುಳಿತು ಭಾಷಣ ಮಾಡಿಕೊಂಡು ಹೋಗಿಲ್ಲ. ಕಾರ್ಯಕರ್ತನಾಗಿ ಕಸ ಗುಡಿಸಿ, ಅಧ್ಯಕ್ಷನಾಗಿ ಪಕ್ಷದ ಬಾವುಟ ಕಟ್ಟಿ, ಎಲ್ಲ ಕೆಲಸ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ನಂತರ ಹಾಗೂ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಪಕ್ಷದ ಕಾರ್ಯಕರ್ತನಾಗಿಯೇ ಇರಲು ಬಯಸುತ್ತೇನೆ ಎಂದು ದೆಹಲಿಯಲ್ಲಿ ಹೇಳಿಕೆ ನೀಡಿದ್ದರ ಬಗ್ಗೆ ಕೇಳಿದಾಗ, ನಾನು ಲೈಫ್ ಟೈಮ್ ಕಾರ್ಯಕರ್ತ. ನಾನು ಒಬ್ಬ ವರ್ಕರ್. ಅಧ್ಯಕ್ಷನಾದಾಗಲೂ ಪಕ್ಷದ ಬಾವುಟ ಕಟ್ಟಿದ್ದೇನೆ. ಕಾರ್ಯಕರ್ತನಾದಾಗಲೂ ಬಾವುಟ ಕಟ್ಟಿದ್ದೇನೆ, ಪೋಸ್ಟರ್ ಅಂಟಿಸಿದ್ದೇನೆ, ಕಸ ಗುಡಿಸಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಏನೇನು ಬೇಕೋ ಎಲ್ಲವನ್ನೂ ಮಾಡಿದ್ದೇನೆ ಎಂದರು.
ದೆಹಲಿಯಲ್ಲಿ ನಡೆಯುವ ಸಿಡಬ್ಲ್ಯೂಸಿ ಸಭೆಗೆ ತಾವು ತೆರಳುವಿರಾ ಎಂದು ಕೇಳಿದಾಗ, ನನ್ನನ್ನು ಕರೆದರೆ ಖಂಡಿತಾ ಹೋಗುತ್ತೇನೆ. ಆದರೆ ಇದುವರೆಗೂ ಕರೆದಿಲ್ಲ ಎಂದರು.
ಖರ್ಗೆ ಅವರ ಜೊತೆ ನಾಯಕತ್ವ ವಿಚಾರವಾಗಿ ಚರ್ಚೆ ನಡೆಸಿದ್ದೀರಾ ಎಂದು ಕೇಳಿದಾಗ, ಯಾವ ವಿಚಾರವಾಗಿಯೂ ಚರ್ಚೆ ನಡೆಸಿಲ್ಲ. ನಾನು ಚರ್ಚೆ ಮಾಡುವುದೂ ಇಲ್ಲ. ಮಾಡುವ ಅವಶ್ಯಕತೆಯೂ ಇಲ್ಲ. ನಾನು ಮತ್ತು ಸಿದ್ದರಾಮಯ್ಯ ಅವರು ಈಗಾಗಲೇ ಇದರ ಬಗ್ಗೆ ಹೇಳಿದ್ದೇವೆ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ಅವರು ಏನು ಹೇಳುತ್ತಾರೋ ಆ ರೀತಿ ಕೇಳಿಕೊಂಡು ಹೋಗುತ್ತೇವೆ ಎಂದರು.
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…