ಕಾಪು : ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದು ಎಂಬ ಭಾವನೆಯನ್ನು ಹೊಂದಿರುವ ಬಿಜೆಪಿಗೆ ಕಾರ್ಯಕರ್ತರೇ ಆಸ್ತಿಗಳಾಗಿದ್ದಾರೆ. ಕಾರ್ಯಕರ್ತರ ನೈಜ ಶ್ರಮವೇ ಪಕ್ಷದ ಗೆಲುವಿಗೆ ಆಧಾರವಾಗಲಿದೆ ಎಂದು ಬಿಜೆಪಿ ಅಭ್ಯರ್ಥಿ / ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.
ಕಾಪು ವಿಧಾನಸಭಾ ಕ್ಷೇತ್ರದ ಎಲ್ಲೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಎಲ್ಲೂರು, ಮಜೂರು, ಬೆಳಪು ಮತ್ತು ಕುತ್ಯಾರು ಪರಿಸರದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸೇರಿಕೊಂಡು ಮನೆ ಮನೆಗೆ ಭೇಟಿ ನೀಡಿ, ಮತಯಾಚನೆ ನಡೆಸಿ ಅವರು ಮಾತನಾಡಿದರು.
ಎಲ್ಲೂರು ಜಿ.ಪಂ. ಕ್ಷೇತ್ರದ ಮಜೂರು, ಎಲ್ಲೂರು, ಕುತ್ಯಾರು ಸಹಿತ ವಿವಿಧ ಗ್ರಾಮ ಪಂಚಾಯತ್ಗಳಲ್ಲಿ ಬಿಜೆಪಿ ಬೆಂಬಲಿತ ಆಡಳಿತ ಅಧಿಕಾರದಲ್ಲಿದೆ. ಇಲ್ಲಿನ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸದಸ್ಯರುಗಳೂ ಬಿಜೆಪಿಗರೇ ಆಗಿದ್ದು, ಈ ಭಾಗದಲ್ಲಿ ಸಮರ್ಥ ಆಡಳಿತದೊಂದಿಗೆ ಅಭಿವೃದ್ಧಿಗೆ ಪೂರಕವಾಗಿ ಅನುದಾನ ಬಿಡುಗಡೆಗೊಳಿಸಲು ಬಿಜೆಪಿಯಿಂದ ಮಾತ್ರಾ ಸಾಧ್ಯವಿದೆ ಎಂದರು.
ಕಾಂಗ್ರೆಸ್ ಪಕ್ಷ ಕೇವಲ ನಗರಾಡಳಿತ ವ್ಯವಸ್ಥೆಯತ್ತ ಮಾತ್ರಾ ದೃಷ್ಟಿ ಹರಿಸುತ್ತಿದ್ದು, ಬಿಜೆಪಿಯಿಂದ ಮಾತ್ರಾ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಸಾಧ್ಯವಿದೆ. ಅದನ್ನು ಮತದಾರರು ಕೂಡಾ ಅರಿತುಕೊಂಡಿದ್ದು, ಅವರಿಗೆ ಸೂಕ್ತವಾದ ಮಾರ್ಗದರ್ಶನ ನೀಡುವಲ್ಲಿ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದರು.
ಬಿಜೆಪಿ ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಜಿ. ಸುವರ್ಣ, ತಾ.ಪಂ. ಸದಸ್ಯರಾದ ಶಶಿಪ್ರಭಾ ಶೆಟ್ಟಿ, ಕೇಶವ ಮೊಯ್ಲಿ, ಎಲ್ಲೂರು ಗ್ರಾ.ಪಂ. ಅಧ್ಯಕ್ಷ ವಸಂತಿ ಮಧ್ವರಾಜ್, ಕುತ್ಯಾರು ಗ್ರಾ.ಪಂ. ಅಧ್ಯಕ್ಷ ಧೀರಜ್ ಶೆಟ್ಟಿ, ಮಜೂರು ಗ್ರಾ.ಪಂ. ಅಧ್ಯಕ್ಷ ಸಂದೀಪ್ ರಾವ್, ಬಿಜೆಪಿ ಚುನಾವಣಾ ಏಜಂಟ್ ಗಂಗಾಧರ ಸುವರ್ಣ, ಎಸ್ಸಿ/ಎಸ್ಟಿ ಮೋರ್ಚಾ ಅಧ್ಯಕ್ಷ ಚಂದ್ರ ಮಲ್ಲಾರು ಮೊದಲಾದವರು ಉಪಸ್ಥಿತರಿದ್ದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]