ಬೆಂಗಳೂರು: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಸಚಿವಅಮಿತ್ ಶಾ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಗರಂ ಆಗಿದ್ದಾರೆ ಅಂತ ಮೂಲಗಳು ತಿಳಿಸಿವೆ. ದಕ್ಷಿಣ ಕನ್ನಡದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ, ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ ಆನಂತರದ ಬೆಳವಣಿಗೆಗಳು ಇತ್ಯಾದಿಗಳ ಬಗ್ಗೆ ಅಮಿತ್ ಶಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಅಮಿತ್ ಶಾ ಅವರನ್ನು ಸಮಾಧಾನಿಸಲು ಸಿಎಂ ಯತ್ನಿಸಿದ್ದಾರೆ. ಆದರೆ ಇದಕ್ಕೆ ಸಮಾಧಾನಗೊಳ್ಳದ ಅಮಿತ್ ಶಾ, ಇದು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ. ಅಮಿತ್ ಶಾ ಅವರನ್ನು ಭೇಟಿಯಾದ ಬಸವರಾಜ ಬೊಮ್ಮಾಯಿ, ಸುಮಾರು 20 ನಿಮಿಷಗಳ ಕಾಲ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸಚಿವ ಅಮಿತ್ ಶಾ ಜೊತೆ ಸುಮಾರು 20 ನಿಮಿಷಗಳ ಕಾಲ ಮಹತ್ವದ ಮಾತುಕತೆ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಹಾಗೂ ನಂತರದ ಬೆಳವಣಿಗೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.
ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಇದೇ ಮೊದಲ ಬಾರಿಗೆ ಪಕ್ಷಕ್ಕೆ ಮುಜುಗರ ಆಗಿದೆ. ಈ ಹಿಂದೆ ಯಾವತ್ತು ಇಂತಹ ಪರಿಸ್ಥಿತಿ ಬಂದಿರಲಿಲ್ಲ. ಇದು ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಯಿತು. ಇದರಿಂದ ಪಕ್ಷಕ್ಕೆ ಸಾಕಷ್ಟು ಡ್ಯಾಮೇಜ್ ಆಯಿತು ಅಂತ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೂಡಲೇ ಕಾರ್ಯಕರ್ತರ ವಿಶ್ಚಾಸಗಳಿಸಲು ನೀವು ಕ್ರಮಕೈಗೊಳ್ಳಬೇಕಿತ್ತು ಅಂತ ಅಮಿತ್ ಶಾ ಹೇಳಿದ್ರು. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಸಮರ್ಥನೆಗೆ ಮುಂದಾದ್ರು. ತಾವು ಕೈಗೊಂಡ ಕ್ರಮಗಳ ಬಗ್ಗೆ ಹೇಳಿದ್ರು. ಇದಕ್ಕೆ ಒಪ್ಪದ ಅಮಿತ್ ಶಾ, ಇಡೀ ಪ್ರಕರಣವನ್ನು ನೀವು ನಿರ್ವಹಿಸಿದ ರೀತಿ ಪ್ರತಿಪಕ್ಷಗಳಿಗೆ ಆಹಾರವಾಗಿದೆ. ಇದು ಪುನರಾವರ್ತನೆ ಆಗದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಕಾರ್ಯಕರ್ತರೆ ಪಕ್ಷದ ಜೀವಾಳ, ಕಾರ್ಯರ್ತರ ಭಾವನೆಗಳಿಗೆ ನೋವಾಗದಂತೆ ಕ್ರಮಗಳನ್ನು ಕೈಗೊಳ್ಳಿ ಎಂದಿದ್ದಾರೆ. ಇನ್ನು ಮುಂದೆ ರಾಜೀನಾಮೆ ನೀಡಿರುವವರ ಮನವೊಲಿಸಿ, ಪಕ್ಷಕ್ಕೆ ವಾಪಸ್ ಕರೆ ತನ್ನಿ ಅಂತ ಸಿಎಂಗೆ ಅಮಿತ್ ಶಾ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…