Featured

ಕಾರ್ಯಕರ್ತರ ಶ್ರಮದ ಫಲವಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ : ಎಂ.ಪಿ.ರೇಣುಕಾಚಾರ್ಯ -Vishwanews24

ಕಾರ್ಯಕರ್ತರ ಶ್ರಮದ ಫಲವಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ : ಎಂ.ಪಿ.ರೇಣುಕಾಚಾರ್ಯ -Vishwanews24

ಬೆಂಗಳೂರು: “ಹದಿನೇಳು ಮಂದಿಯಿಂದ ಬಿಜೆಪಿ ಸರ್ಕಾರ ಬಂದಿಲ್ಲ. ಬದಲಾಗಿ ಕಾರ್ಯಕರ್ತರ ಶ್ರಮದ ಫಲವಾಗಿ ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಿದೆ” ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, “ಪಕ್ಷದ ಕಾರ್ಯಕರ್ತರ ಶ್ರಮದಿಂದಾಗಿ 105 ಶಾಸಕರು ಗೆದ್ದಿದ್ದರು. ಯಾರೋ ಒಬ್ಬರಿಂದಾಗಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಹೇಳಲು ಸಾಧ್ಯವಿಲ್ಲ. ಪಕ್ಷವು ಲಕ್ಷಾಂತರ ಕಾರ್ಯಕರ್ತರದ ಪರಿಶ್ರಮದಿಂದಾಗಿ ಅಧಿಕಾರಕ್ಕೆ ಬಂದಿದೆ” ಎಂದಿದ್ದಾರೆ.

“ಮೊದಲು 105 ಶಾಸಕರು ಬಳಿಕ ಜೆಡಿಎಸ್‌ ಹಾಗೂ ಕಾಂಗ್ರೆಸ್‌ನಿಂದ 17 ಮಂದಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಸರ್ಕಾರವು ನನ್ನಿಂದಲೇ ಅಧಿಕಾರಕ್ಕೆ ಬಂದಿದೆ ಎಂದು ಯಾರು ಹೇಳಿಕೊಳ್ಳುತ್ತಾರೋ ಅವರು ಈ ವಿಚಾರವನ್ನು ತಿಳಿದುಕೊಳ್ಳಬೇಕು” ಎಂದು ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಸಿಎಂ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ” ಎಂದಿದ್ದಾರೆ.

ಸಿ.ಪಿ.ಯೋಗೇಶ್ವರ್‌ ಅವರಿಗೆ ಸಚಿವ ಸ್ಥಾನ ನೀಡಿದರೆ ಏನು ತಪ್ಪು ಎಂಬ ರಮೇಶ್‌ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, “ಇದು ಅವರ ವೈಯುಕ್ತಿಕ ಅಭಿಪ್ರಾಯವಾಗಿದೆ. ಎಲ್ಲದಕ್ಕೂ ಪಕ್ಷದ ತೀರ್ಮಾನ ಅಂತಿಮ” ಎಂದಿದ್ದಾರೆ.

“ಇಂದು ನಮ್ಮ ನಿವಾಸದಲ್ಲಿ ಹತ್ತು ಮಂದಿ ಶಾಸಕರು ಒಟ್ಟಿಗೆ ಸೇರಿದ್ದೆವು ನಾವು ಹೋಟೆಲ್‌‌‌‌, ರೆಸಾರ್ಟ್‌ನಲ್ಲಿ ಸಭೆ ಮಾಡುವುದಿಲ್ಲ. ನಮ್ಮ ನಿವಾಸದಲ್ಲಿ ಚರ್ಚೆ ನಡೆಸಿದ್ದೇವೆ. ಈ ಬಗ್ಗೆ ವರಿಷ್ಟರಿಗೆ ಕೂಡಲೇ ತಿಳಿಸುತ್ತೇವೆ” ಎಂದು ಹೇಳಿದ್ದಾರೆ.

 

Vishwa News 24

Recent Posts

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

2 hours ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

2 hours ago