ನ್ಯೂಜೆರ್ಸಿ: ಆರೋಗ್ಯವನ್ನೂ ಲೆಕ್ಕಿಸದೇ ವಿಧಾನಸಭೆ ಚುನಾವಣೆಯಲ್ಲಿ ದುಡಿದಿದ್ದ ನನಗೆ ಫಲಿತಾಂಶ ಕಂಡು ರಾಜಕೀಯ ನಿವೃತ್ತಿ ಪಡೆಯಬೇಕು ಎನಿಸಿತ್ತು. ಆಗ ಕಾಲಭೈರವೇಶ್ವರನ ಪವಾಡ ನಡೆಯಿತು. ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿತು ಎಂದು ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಅಮೆರಿಕಾದ ನ್ಯೂಜೆರ್ಸಿಯಲ್ಲಿ ಆದಿಚುಂಚನಗಿರಿ ಮಠದ ವತಿಯಿಂದ ನಿರ್ಮಾಣವಾಗುತ್ತಿರುವ ಕಾಲ ಭೈರವೇಶ್ವರ ದೇಗುಲದ ಅಡಿಗಲ್ಲು ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ತಾವು ಮುಖ್ಯಮಂತ್ರಿಯಾದ ಸನ್ನಿವೇಶದ ಕುರಿತು ಮಾತನಾಡಿದ್ದಾರೆ.
‘ಫಲಿತಾಂಶದ ದಿನ ಬೆಳಗ್ಗೆ ಕಾಲಭೈರವೇಶ್ವರನ ದರ್ಶನ ಪಡೆಯಬೇಕು ಎಂದು ನಿರ್ಮಲಾನಂದನಾಥ ಶ್ರೀಗಳು ಸೂಚಿಸಿದ್ದರು. ಅವರ ಸೂಚನೆ ಮೇರೆಗೆ ಅಂದು ಅಂದು ಬೆಳಗ್ಗೆಯೇ ನಾನು ಆದಿಚುಂಚನಗಿರಿಗೆ ತೆರಳಿ ದರ್ಶನ ಪಡೆದು ಬೆಂಗಳೂರಿಗೆ ಆಗಮಿಸಿದ್ದೆ.
ಫಲಿತಾಂಶ ನೋಡಿದಾಗ ನನಗೆ ಬೇಸರವಾಗಿತ್ತು. ಚುನಾವಣೆಯಲ್ಲಿ ನಾನು ಅವಿರತ ಪರಿಶ್ರಮ ಹಾಕಿದ್ದೆ. ಆರೋಗ್ಯವನ್ನೂ ಲೆಕ್ಕಿಸದೇ ಕೆಲಸ ಮಾಡಿದ್ದೆ. ಇಷ್ಟಾದರೂ ಜನ ನನಗೆ ಮನ್ನಣೆ ನೀಡಲಿಲ್ಲವಲ್ಲ ಎಂದೆನಿಸಿ, ರಾಜಕೀಯ ನಿವೃತ್ತಿ ಪಡೆಯಲು ಯೋಚನೆ ಮಾಡುತ್ತಿದ್ದೆ. ಆಗ ಕಾಂಗ್ರೆಸ್ ಕಡೆಯಿಂದ ಕರೆ ಬಂತು. ನೀವೇ ಮುಖ್ಯಮಂತ್ರಿ ಆಗಬೇಕು ಎಂದು ಕಾಂಗ್ರೆಸ್ ಹೇಳಿತು. ಇದೇ ನೋಡಿ ಕಾಲಭೈರವೇಶ್ವರನ ಶಕ್ತಿ,’ ಎಂದು ಕುಮಾರಸ್ವಾಮಿ ಹೇಳಿದರು.
‘ಆದಿಚುಂಚನಗಿರಿಯಲ್ಲಿರುವ ಕಾಲಭೈರವನ ದೇವಾಲಯ ನಿರ್ಮಾಣಕ್ಕೆ ಬಾಲಗಂಗಾಧರನಾಥ ಸ್ವಾಮೀಜಿ ನನ್ನ ಕೈಯಲ್ಲೇ ಅಡಿಗಲ್ಲು ಹಾಕಿಸಿದ್ದರು. ನ್ಯೂಜೆರ್ಸಿಯಲ್ಲಿ ನಿರ್ಮಿಸುತ್ತಿರುವ ದೇಗುಲಕ್ಕೂ ನಾನೇ ಅಡಿಗಲ್ಲು ಹಾಕುತ್ತಿದ್ದೇನೆ. ಇದು ತಮ್ಮ ಪಾಲಿನ ಪುಣ್ಯ,’ ಎಂದು ಎಚ್ಡಿಕೆ ಸ್ಮರಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…