ನ್ಯೂಜೆರ್ಸಿ: ಆರೋಗ್ಯವನ್ನೂ ಲೆಕ್ಕಿಸದೇ ವಿಧಾನಸಭೆ ಚುನಾವಣೆಯಲ್ಲಿ ದುಡಿದಿದ್ದ ನನಗೆ ಫಲಿತಾಂಶ ಕಂಡು ರಾಜಕೀಯ ನಿವೃತ್ತಿ ಪಡೆಯಬೇಕು ಎನಿಸಿತ್ತು. ಆಗ ಕಾಲಭೈರವೇಶ್ವರನ ಪವಾಡ ನಡೆಯಿತು. ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿತು ಎಂದು ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಅಮೆರಿಕಾದ ನ್ಯೂಜೆರ್ಸಿಯಲ್ಲಿ ಆದಿಚುಂಚನಗಿರಿ ಮಠದ ವತಿಯಿಂದ ನಿರ್ಮಾಣವಾಗುತ್ತಿರುವ ಕಾಲ ಭೈರವೇಶ್ವರ ದೇಗುಲದ ಅಡಿಗಲ್ಲು ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ತಾವು ಮುಖ್ಯಮಂತ್ರಿಯಾದ ಸನ್ನಿವೇಶದ ಕುರಿತು ಮಾತನಾಡಿದ್ದಾರೆ.
‘ಫಲಿತಾಂಶದ ದಿನ ಬೆಳಗ್ಗೆ ಕಾಲಭೈರವೇಶ್ವರನ ದರ್ಶನ ಪಡೆಯಬೇಕು ಎಂದು ನಿರ್ಮಲಾನಂದನಾಥ ಶ್ರೀಗಳು ಸೂಚಿಸಿದ್ದರು. ಅವರ ಸೂಚನೆ ಮೇರೆಗೆ ಅಂದು ಅಂದು ಬೆಳಗ್ಗೆಯೇ ನಾನು ಆದಿಚುಂಚನಗಿರಿಗೆ ತೆರಳಿ ದರ್ಶನ ಪಡೆದು ಬೆಂಗಳೂರಿಗೆ ಆಗಮಿಸಿದ್ದೆ.
ಫಲಿತಾಂಶ ನೋಡಿದಾಗ ನನಗೆ ಬೇಸರವಾಗಿತ್ತು. ಚುನಾವಣೆಯಲ್ಲಿ ನಾನು ಅವಿರತ ಪರಿಶ್ರಮ ಹಾಕಿದ್ದೆ. ಆರೋಗ್ಯವನ್ನೂ ಲೆಕ್ಕಿಸದೇ ಕೆಲಸ ಮಾಡಿದ್ದೆ. ಇಷ್ಟಾದರೂ ಜನ ನನಗೆ ಮನ್ನಣೆ ನೀಡಲಿಲ್ಲವಲ್ಲ ಎಂದೆನಿಸಿ, ರಾಜಕೀಯ ನಿವೃತ್ತಿ ಪಡೆಯಲು ಯೋಚನೆ ಮಾಡುತ್ತಿದ್ದೆ. ಆಗ ಕಾಂಗ್ರೆಸ್ ಕಡೆಯಿಂದ ಕರೆ ಬಂತು. ನೀವೇ ಮುಖ್ಯಮಂತ್ರಿ ಆಗಬೇಕು ಎಂದು ಕಾಂಗ್ರೆಸ್ ಹೇಳಿತು. ಇದೇ ನೋಡಿ ಕಾಲಭೈರವೇಶ್ವರನ ಶಕ್ತಿ,’ ಎಂದು ಕುಮಾರಸ್ವಾಮಿ ಹೇಳಿದರು.
‘ಆದಿಚುಂಚನಗಿರಿಯಲ್ಲಿರುವ ಕಾಲಭೈರವನ ದೇವಾಲಯ ನಿರ್ಮಾಣಕ್ಕೆ ಬಾಲಗಂಗಾಧರನಾಥ ಸ್ವಾಮೀಜಿ ನನ್ನ ಕೈಯಲ್ಲೇ ಅಡಿಗಲ್ಲು ಹಾಕಿಸಿದ್ದರು. ನ್ಯೂಜೆರ್ಸಿಯಲ್ಲಿ ನಿರ್ಮಿಸುತ್ತಿರುವ ದೇಗುಲಕ್ಕೂ ನಾನೇ ಅಡಿಗಲ್ಲು ಹಾಕುತ್ತಿದ್ದೇನೆ. ಇದು ತಮ್ಮ ಪಾಲಿನ ಪುಣ್ಯ,’ ಎಂದು ಎಚ್ಡಿಕೆ ಸ್ಮರಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…