ಕಾಪು :ಗ್ಯಾಂಗ್ರೀನ್ ಕಾಯಿಲೆಯಿಂದ ಕಾಲು ಕಳೆದುಕೊಂಡ ಕಾಪುವಿನ ಎಲ್ಲೂರು ಗ್ರಾಮ ಪಂಚಾಯತ್ ಅದಮಾರು ನಿವಾಸಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಸ್ಕೃತ ವರದಿ ಬಂದಿತ್ತು. ಈ ವರದಿಗೆ ತಕ್ಷಣ ಸ್ಪಂದಿಸಿದ ಕಾಪು ಕುಲಾಲ ಯುವ ವೇದಿಕೆ ಹಾಗೂ ಕಾಪು ಕುಲಾಲ ಸಂಘವು ಬಡ ಕುಟುಂಬಕ್ಕೆಸಹಾಯಹಸ್ತ ಚಾಚುವ ಭರವಸೆಯನ್ನು ನೀಡಿತ್ತು. ಈ ನಿಮಿತ್ತ ಸಹೃದಯಿ ದಾನಿಗಳಾದ ತಮ್ಮೆಲ್ಲರ ಬೆಂಬಲದಿಂದ ಒಟ್ಟುಗೂಡಿದ ಸಹಾಯಧನವನ್ನು ದಿನಾಂಕ 25/09/2023ನೇ ಸೋಮವಾರ ಅವರ ಮನೆಗೆ ತೆರಳಿ ಹಸ್ತಾಂತರಿಸಲಾಯಿತು.
ಹನಿ ಹನಿ ಸೇರಿ ಹಳ್ಳ ಎನ್ನುವಂತೆ ತಮ್ಮೆಲ್ಲರ ಸಹಾಯಧನವೇ ಒಟ್ಟುಗೂಡಿ ರೂ 75, 000 ನ್ನು ಅವರ ಮನೆಗೆ ತೆರಳಿ ನೀಡಲಾಯಿತು .
ಹಣ ಹಸ್ತಾಂತರ ಸಂದರ್ಭ ಕಾಪು ಕುಲಾಲ ಯುವ ವೇದಿಕೆಯ ಉದಯ ಕುಲಾಲ್, ಕಾಪು ಕುಲಾಲ ಸಂಘದ ಅಧ್ಯಕ್ಷರು ಸಂದೀಪ್ ಬಂಗೇರ, ಆಸರೆ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ಸತೀಶ್ ಕುಲಾಲ್ ಕಡಿಯಾಳಿ, ಸರ್ವಜ್ಞ ಆಸರೆ ಕಿರಣ ಬಳಗದ ಪ್ರಭಾಕರ್ ಇನ್ನ, ನಿವೃತ್ತ ಸೈನಿಕರು ಬಾಲಕೃಷ್ಣ ಭಂಡಾರಿ,ಬೊಗ್ಗು ಮೂಲ್ಯ ಬೇಲಾಡಿ, ಶಂಕರ ಮೂಲ್ಯ ಬೇಲಾಡಿ, ಸಂತೋಷ್ ಶೆಟ್ಟಿ ಬರ್ಪಾಣಿ, ಸುಮಂತ್ ಕುಲಾಲ್ ಪಾದೂರು, ರವೀಂದ್ರ ಕುಲಾಲ್ ಪಣಿಯೂರು, ಕಾಂತಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಕುಲಾಲ್ ಬೇಲಾಡಿ,ಮಹೇಶ್ ಕುಲಾಲ್ ಬೇಲಾಡಿ,ಸತೀಶ್ ಕುಲಾಲ್ ಉಳಿಯಾರು ಉಪಸ್ಥಿತರಿದ್ದರು..
ನೆರವು ನೀಡುವವರು ರಾಜೇಶ್ ಕುಲಾಲ್ ಅವರ ಪತ್ನಿ ವಿನೋದ ಅವರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಬಹುದು.
ಬ್ಯಾಂಕ್ ಖಾತೆ ಮಾಹಿತಿ ಹೀಗಿದೆ:
Contact Number::9008559310
Google pay number
9008559310
Bank detail CANARA BANK Mudharangadi.
NAME: Vinoda
A/c number: 110106025209
IFSC: CNRB0000638.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…