ಬೆಂಗಳೂರು: ಕಾಲೇಜಿಗೆ ದ್ವಿಚಕ್ರ ವಾಹನ ಹಾಗೂ ಕಾರಿನಲ್ಲಿಹೋಗುವ ಮಂದಿಗೆ ಕಡಿವಾಣ ಹಾಕುವುದಕ್ಕೆ ರಾಜ್ಯ ಸರಕಾರ ಮುಂದಾಗಿದ್ದು, ಈ ಬಗ್ಗೆ ಸದ್ಯದಲ್ಲೇ ಅಧಿಕೃತ ಪ್ರಕಟಣೆಯನ್ನು ರಾಜ್ಯ ಸರಕಾರ ಹೊರಡಿಸಲಿದೆ ಎನ್ನಲಾಗಿದೆ.
ಉನ್ನತ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ದ್ವಿಚಕ್ರ ವಾಹನ ಹಾಗೂ ಕಾರುಗಳನ್ನು ನಿರ್ಬಂಧಿಸಲು ,ಸಾರ್ವಜನಿಕ ಸಾರಿಗೆ ಉತ್ತೇಜಿಸಿ, ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಕಾಲೇಜು ಶಿಕ್ಷಣ ಇಲಾಖೆ ಈ ಪ್ರಸ್ತಾವನೆ ಸಿದ್ಧಪಡಿಸುತ್ತಿದೆ.
ಉನ್ನತ ಶಿಕ್ಷಣ ಇಲಾಖೆ ಸಚಿವರಾದ ಜಿ.ಟಿ.ದೇವೇಗೌಡ ಅವರು ಕಾಲೇಜಿನ ಕ್ಯಾಂಪಸ್ ಒಳಗೆ ವಿದ್ಯಾರ್ಥಿಗಳ ವಾಹನ ನಿಷೇಧಿಸುವ ಬಗ್ಗೆ ಕಾಲೇಜು ಮಂಡಳಿಗಳೊಂದಿಗೆ ಸಭೆ ನಡೆಸುವ ಸಾಧ್ಯತೆ ಇದ್ದು ಈ ಸಭೆಯಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳು, ಖಾಸಗಿ ಮತ್ತು ಡೀಮ್ಡ್ ವಿ.ವಿ ಪ್ರತಿನಿಧಿಗಳು, ವೃತ್ತಿಪರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಪೋಷಕರ ಸಭೆಗಳನ್ನು ನಡೆಸಲು ಮುಂದಾಗಿದ್ದು, ಸಭೆ ನಡೆದ ಬಳಿಕ ವಾಹನಗಳ ನಿಷೇಧದ ಬಗ್ಗೆ ಘೋಷಣೆ ಮಾಡಲಾಗುವುದು ಎನ್ನಲಾಗಿದೆ.
ವಿದ್ಯಾರ್ಥಿಗಳ ವಾಹನಗಳು ಅಪಘಾತಗಳಾಗುತ್ತಿರುವ ಹಿನ್ನೆಲೆಯಲ್ಲಿ ಕಾಲೇಜಿನ ಕ್ಯಾಂಪಸ್ ಒಳಗಡೆ ದ್ವಿಚಕ್ರ ಮತ್ತು ಕಾರುಗಳನ್ನು ನಿರ್ಬಂಧಿಸಲು ಇಲಾಖೆ ಚಿಂತನೆ ನಡೆಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…