ಬೆಂಗಳೂರು: ಕಾಲೇಜಿಗೆ ದ್ವಿಚಕ್ರ ವಾಹನ ಹಾಗೂ ಕಾರಿನಲ್ಲಿಹೋಗುವ ಮಂದಿಗೆ ಕಡಿವಾಣ ಹಾಕುವುದಕ್ಕೆ ರಾಜ್ಯ ಸರಕಾರ ಮುಂದಾಗಿದ್ದು, ಈ ಬಗ್ಗೆ ಸದ್ಯದಲ್ಲೇ ಅಧಿಕೃತ ಪ್ರಕಟಣೆಯನ್ನು ರಾಜ್ಯ ಸರಕಾರ ಹೊರಡಿಸಲಿದೆ ಎನ್ನಲಾಗಿದೆ.
ಉನ್ನತ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ದ್ವಿಚಕ್ರ ವಾಹನ ಹಾಗೂ ಕಾರುಗಳನ್ನು ನಿರ್ಬಂಧಿಸಲು ,ಸಾರ್ವಜನಿಕ ಸಾರಿಗೆ ಉತ್ತೇಜಿಸಿ, ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಕಾಲೇಜು ಶಿಕ್ಷಣ ಇಲಾಖೆ ಈ ಪ್ರಸ್ತಾವನೆ ಸಿದ್ಧಪಡಿಸುತ್ತಿದೆ.
ಉನ್ನತ ಶಿಕ್ಷಣ ಇಲಾಖೆ ಸಚಿವರಾದ ಜಿ.ಟಿ.ದೇವೇಗೌಡ ಅವರು ಕಾಲೇಜಿನ ಕ್ಯಾಂಪಸ್ ಒಳಗೆ ವಿದ್ಯಾರ್ಥಿಗಳ ವಾಹನ ನಿಷೇಧಿಸುವ ಬಗ್ಗೆ ಕಾಲೇಜು ಮಂಡಳಿಗಳೊಂದಿಗೆ ಸಭೆ ನಡೆಸುವ ಸಾಧ್ಯತೆ ಇದ್ದು ಈ ಸಭೆಯಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳು, ಖಾಸಗಿ ಮತ್ತು ಡೀಮ್ಡ್ ವಿ.ವಿ ಪ್ರತಿನಿಧಿಗಳು, ವೃತ್ತಿಪರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಪೋಷಕರ ಸಭೆಗಳನ್ನು ನಡೆಸಲು ಮುಂದಾಗಿದ್ದು, ಸಭೆ ನಡೆದ ಬಳಿಕ ವಾಹನಗಳ ನಿಷೇಧದ ಬಗ್ಗೆ ಘೋಷಣೆ ಮಾಡಲಾಗುವುದು ಎನ್ನಲಾಗಿದೆ.
ವಿದ್ಯಾರ್ಥಿಗಳ ವಾಹನಗಳು ಅಪಘಾತಗಳಾಗುತ್ತಿರುವ ಹಿನ್ನೆಲೆಯಲ್ಲಿ ಕಾಲೇಜಿನ ಕ್ಯಾಂಪಸ್ ಒಳಗಡೆ ದ್ವಿಚಕ್ರ ಮತ್ತು ಕಾರುಗಳನ್ನು ನಿರ್ಬಂಧಿಸಲು ಇಲಾಖೆ ಚಿಂತನೆ ನಡೆಸಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…