ಪುತ್ತೂರು: ಕಾಲೇಜು ಮತ್ತು ಕಾಲೇಜಿನ ಸುತ್ತಮುತ್ತಲಿನ ಅಂಗಡಿಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಸಿಕ್ಕರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಆಯುಕ್ತರಾದ ಎಚ್.ಕೆ. ಕೃಷ್ಣಮೂರ್ತಿ ಎಚ್ಚರಿಕೆ ನೀಡಿದ್ದಾರೆ.
ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ವಿರುದ್ಧ ವಿಶೇಷ ಜಾಗೃತಿ ಅಭಿಯಾನ ಆರಂಭವಾಗಿದೆ. ಎಚ್ಚರಿಕೆ ನೀಡುವ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆಯಿಂದ ಮೊದಲ ಹಂತದಲ್ಲಿ ಅನಿರೀಕ್ಷಿತ ದಾಳಿ ನಡೆಸಲಾಗುತ್ತಿದೆ. ಮೊದಲ ಹಂತದ ದಾಳಿಯಲ್ಲಿ ಎಚ್ಚರಿಕೆ ನೀಡುವ ಕ್ರಮ ಮಾತ್ರ ಕೈಗೊಳ್ಳಲಾಗುತ್ತದೆ. ಎರಡನೇ ಹಂತದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ
ಮುಂದಿನ ಹಂತದ ದಾಳಿ ವೇಳೆ ಅಂಗಡಿಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಕೈಯಲ್ಲಿ ಮೊಬೈಲ್ ಸಿಕ್ಕಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಪೋಷಕರು ಮಕ್ಕಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಶಾಲಾ ಕಾಲೇಜುಗಳಿಗೆ ಭೇಟಿ ನೀಡಲು ಅಧಿಕಾರಿಯೊಬ್ಬರನ್ನು ಶೀಘ್ರ ನೇಮಕ ಮಾಡಲಾಗುವುದು. ಇದಲ್ಲದೆ ಶಾಲಾ ಕಾಲೇಜುಗಳಲ್ಲಿ ಸಮಾಲೋಚನಾ ಸಮಿತಿ ರಚನೆ ನಡೆಯುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಬಹುತೇಕ ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿಯೂ ಸಿಸಿ ಕ್ಯಾಮರಾ ಅಳವಡಿಕೆಗೆ ಸೂಚನೆ ನೀಡಲಾಗಿದೆ. ಆದರೆ ಇಲ್ಲಿ ಅನುದಾನದ ಲಭ್ಯತೆ ನೋಡಿಕೊಂಡು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…