ತುಮಕೂರು : ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ಹತ್ಯೆ ಪ್ರಕರಣದಲ್ಲಿ ಯಾವ ಲವ್ ಜಿಹಾದ್ ಕಾಣ್ತಿಲ್ಲ. ಅದೊಂದು ಲವ್ ಕೇಸ್, ಇಬ್ಬರ ನಡುವೆ ಲವ್ ಆಗಿ, ಬಳಿಕ ಯುವತಿ ದೂರ ಹೋಗಲು ಶುರು ಮಾಡಿದ್ದಕ್ಕೆ ಹತ್ಯೆಯಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲವ್ ಜಿಹಾದ್ ಆರೋಪಕ್ಕೆ ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಹುಬ್ಬಳ್ಳಿ ಯುವತಿಯ ಹತ್ಯೆ ಘಟನೆ ಲವ್ ಜಿಹಾದ್ ಎಂದು ಪ್ರಹ್ಲಾದ್ ಜೋಶಿ ಹೇಳಿಕೆಗೆ ತುಮಕೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ವಿದ್ಯಾರ್ಥಿನಿಯ ಹತ್ಯೆಯು ಪ್ರೀತಿಯ ನಿರಾಕರಣೆಯಿಂದಾಗಿ ನಡೆದಿದೆ. ಇಬ್ಬರ ನಡುವೆ ಪರಸ್ಪರ ಪ್ರೀತಿ ಉಂಟಾಗಿ, ನಂತರ ಆ ಹೆಣ್ಣುಮಗಳು ದೂರ ಹೋಗಲು ಶುರು ಮಾಡಿದ್ದಾಳೆ. ಬಳಿಕ ಆ ಹುಡುಗ ಯುವತಿಗೆ ಚುಚ್ಚಿದ್ದಾನೆ. ಅದರಲ್ಲಿ ಲವ್ ಜಿಹಾದ್ ಕಾಣುತ್ತಿಲ್ಲ. ಇದೊಂದು ಪ್ರೇಮ ಪ್ರಕರಣವಾಗಿ ಕಾಣುತ್ತಿದೆ ಎಂದು ತಿಳಿಸಿದರು.
ಇನ್ನು, ನನಗೆ ಆ ಘಟನೆಯ ಪೂರ್ತಿ ಮಾಹಿತಿ ಗೊತ್ತಿಲ್ಲ. ಪರಸ್ಪರ ಪ್ರೀತಿ ಮೇಲೆ ಆಗಿರುವ ಘಟನೆ ಇದು. ಬಿಜೆಪಿಯವರು ಸ್ವಾಭಾವಿಕವಾಗಿ ಇಂಥಹ ವಿಚಾರದಲ್ಲಿ ಕಾಂಗ್ರೆಸನ್ನು ದೂಷಣೆ ಮಾಡೋದು ಅವರ ಕೆಲಸ ಎಂದ ಅವರು, ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರನ್ನು ನಾವು ಯಾರೂ ರಕ್ಷಣೆ ಮಾಡುವುದಿಲ್ಲ. ರಾಜ್ಯದ ಜನತೆಗೆ ಗೃಹ ಸಚಿವನಾಗಿ ಭರವಸೆ ಕೊಡುತ್ತಿದ್ದೇನೆ. ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡರೆ ರಕ್ಷಣೆ ಮಾಡುವಂತಹ ಪ್ರಮೇಯವೇ ಇಲ್ಲ ಎಂದು ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…