ತುಮಕೂರು : ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ಹತ್ಯೆ ಪ್ರಕರಣದಲ್ಲಿ ಯಾವ ಲವ್ ಜಿಹಾದ್ ಕಾಣ್ತಿಲ್ಲ. ಅದೊಂದು ಲವ್ ಕೇಸ್, ಇಬ್ಬರ ನಡುವೆ ಲವ್ ಆಗಿ, ಬಳಿಕ ಯುವತಿ ದೂರ ಹೋಗಲು ಶುರು ಮಾಡಿದ್ದಕ್ಕೆ ಹತ್ಯೆಯಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲವ್ ಜಿಹಾದ್ ಆರೋಪಕ್ಕೆ ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಹುಬ್ಬಳ್ಳಿ ಯುವತಿಯ ಹತ್ಯೆ ಘಟನೆ ಲವ್ ಜಿಹಾದ್ ಎಂದು ಪ್ರಹ್ಲಾದ್ ಜೋಶಿ ಹೇಳಿಕೆಗೆ ತುಮಕೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ವಿದ್ಯಾರ್ಥಿನಿಯ ಹತ್ಯೆಯು ಪ್ರೀತಿಯ ನಿರಾಕರಣೆಯಿಂದಾಗಿ ನಡೆದಿದೆ. ಇಬ್ಬರ ನಡುವೆ ಪರಸ್ಪರ ಪ್ರೀತಿ ಉಂಟಾಗಿ, ನಂತರ ಆ ಹೆಣ್ಣುಮಗಳು ದೂರ ಹೋಗಲು ಶುರು ಮಾಡಿದ್ದಾಳೆ. ಬಳಿಕ ಆ ಹುಡುಗ ಯುವತಿಗೆ ಚುಚ್ಚಿದ್ದಾನೆ. ಅದರಲ್ಲಿ ಲವ್ ಜಿಹಾದ್ ಕಾಣುತ್ತಿಲ್ಲ. ಇದೊಂದು ಪ್ರೇಮ ಪ್ರಕರಣವಾಗಿ ಕಾಣುತ್ತಿದೆ ಎಂದು ತಿಳಿಸಿದರು.
ಇನ್ನು, ನನಗೆ ಆ ಘಟನೆಯ ಪೂರ್ತಿ ಮಾಹಿತಿ ಗೊತ್ತಿಲ್ಲ. ಪರಸ್ಪರ ಪ್ರೀತಿ ಮೇಲೆ ಆಗಿರುವ ಘಟನೆ ಇದು. ಬಿಜೆಪಿಯವರು ಸ್ವಾಭಾವಿಕವಾಗಿ ಇಂಥಹ ವಿಚಾರದಲ್ಲಿ ಕಾಂಗ್ರೆಸನ್ನು ದೂಷಣೆ ಮಾಡೋದು ಅವರ ಕೆಲಸ ಎಂದ ಅವರು, ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರನ್ನು ನಾವು ಯಾರೂ ರಕ್ಷಣೆ ಮಾಡುವುದಿಲ್ಲ. ರಾಜ್ಯದ ಜನತೆಗೆ ಗೃಹ ಸಚಿವನಾಗಿ ಭರವಸೆ ಕೊಡುತ್ತಿದ್ದೇನೆ. ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡರೆ ರಕ್ಷಣೆ ಮಾಡುವಂತಹ ಪ್ರಮೇಯವೇ ಇಲ್ಲ ಎಂದು ಹೇಳಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…