ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ರೆಗ್ಯುಲರ್ ಬೇಲ್ ಅಥವಾ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನಾಂಪಲ್ಲಿ ಕೋರ್ಟ್ನಲ್ಲಿ ಈ ಅರ್ಜಿಯ ವಿಚಾರಣೆಯೂ ನಡೆದಿದೆ. ಇಂದು (ಜನವರಿ 03) ನ್ಯಾಯಾಧೀಶರ ಆದೇಶ ಹೊರಬಿದ್ದಿದ್ದು, ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ಜಾಮೀನು ದೊರೆತಿದೆ.
ಡಿಸೆಂಬರ್ 04 ರಂದು ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರಕ್ಕೆ ಅಲ್ಲು ಅರ್ಜುನ್ ಭೇಟಿ ನೀಡಿದ್ದಾಗ ನಡೆದ ಕಾಲ್ತುಳಿತದಲ್ಲಿ ರೇವತಿ ಹೆಸರಿನ ಮಹಿಳೆ ಮೃತಪಟ್ಟಿದ್ದರು. ಅವರ ಪುತ್ರ ಗಂಭೀರವಾಗಿ ಗಾಯಗೊಂಡು ಈಗಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಮೃತ ಮಹಿಳೆಯ ಪತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಆಧರಿಸಿ ಹೈದರಾಬಾದ್ ಪೊಲೀಸರು ಅಲ್ಲು ಅರ್ಜುನ್ ಸೇರಿದಂತೆ ಸಂಧ್ಯಾ ಚಿತ್ರಮಂದಿರ ಮಾಲೀಕ ಹಾಗೂ ಮ್ಯಾನೇಜರ್ ಅನ್ನು ಬಂಧಿಸಿದ್ದರು.
ಅಲ್ಲು ಅರ್ಜುನ್ಗೆ ಈಗ ಷರತ್ತು ಬದ್ಧ ಜಾಮೀನು ಮಂಜೂರಾಗಿದ್ದು, ಜಾಮೀನು ನೀಡಿರುವ ನಾಂಪಲ್ಲಿ ನ್ಯಾಯಾಲಯ, 1 ಲಕ್ಷ ರೂಪಾಯಿ ಭದ್ರತಾ ಮೊತ್ತ ಮತ್ತು ಇಬ್ಬರು ವ್ಯಕ್ತಿಗಳ ಶೂರಿಟಿಯನ್ನು ಕೇಳಿದೆ. ವಿದೇಶ ಪ್ರಯಾಣದ ಮೇಲೆ ಯಾವುದೇ ನಿರ್ಭಂಧ ವಿಧಿಸಿಲ್ಲ ಎನ್ನಲಾಗುತ್ತಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…