ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ರೆಗ್ಯುಲರ್ ಬೇಲ್ ಅಥವಾ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನಾಂಪಲ್ಲಿ ಕೋರ್ಟ್ನಲ್ಲಿ ಈ ಅರ್ಜಿಯ ವಿಚಾರಣೆಯೂ ನಡೆದಿದೆ. ಇಂದು (ಜನವರಿ 03) ನ್ಯಾಯಾಧೀಶರ ಆದೇಶ ಹೊರಬಿದ್ದಿದ್ದು, ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ಜಾಮೀನು ದೊರೆತಿದೆ.
ಡಿಸೆಂಬರ್ 04 ರಂದು ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರಕ್ಕೆ ಅಲ್ಲು ಅರ್ಜುನ್ ಭೇಟಿ ನೀಡಿದ್ದಾಗ ನಡೆದ ಕಾಲ್ತುಳಿತದಲ್ಲಿ ರೇವತಿ ಹೆಸರಿನ ಮಹಿಳೆ ಮೃತಪಟ್ಟಿದ್ದರು. ಅವರ ಪುತ್ರ ಗಂಭೀರವಾಗಿ ಗಾಯಗೊಂಡು ಈಗಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಮೃತ ಮಹಿಳೆಯ ಪತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಆಧರಿಸಿ ಹೈದರಾಬಾದ್ ಪೊಲೀಸರು ಅಲ್ಲು ಅರ್ಜುನ್ ಸೇರಿದಂತೆ ಸಂಧ್ಯಾ ಚಿತ್ರಮಂದಿರ ಮಾಲೀಕ ಹಾಗೂ ಮ್ಯಾನೇಜರ್ ಅನ್ನು ಬಂಧಿಸಿದ್ದರು.
ಅಲ್ಲು ಅರ್ಜುನ್ಗೆ ಈಗ ಷರತ್ತು ಬದ್ಧ ಜಾಮೀನು ಮಂಜೂರಾಗಿದ್ದು, ಜಾಮೀನು ನೀಡಿರುವ ನಾಂಪಲ್ಲಿ ನ್ಯಾಯಾಲಯ, 1 ಲಕ್ಷ ರೂಪಾಯಿ ಭದ್ರತಾ ಮೊತ್ತ ಮತ್ತು ಇಬ್ಬರು ವ್ಯಕ್ತಿಗಳ ಶೂರಿಟಿಯನ್ನು ಕೇಳಿದೆ. ವಿದೇಶ ಪ್ರಯಾಣದ ಮೇಲೆ ಯಾವುದೇ ನಿರ್ಭಂಧ ವಿಧಿಸಿಲ್ಲ ಎನ್ನಲಾಗುತ್ತಿದೆ.
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…