ಉಡುಪಿ: ಆರ್ ಸಿ ಬಿ ಸಂಭ್ರಮಾಚರಣೆಯ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಮೃತಳಾದ ಹೆಬ್ರಿ ಮೂಲದ ಅವಘಡದಲ್ಲಿ ಮೃತಳಾದ ಚಿನ್ಮಯಿ ಶೆಟ್ಟಿ (19) ಕುಟುಂಬಕ್ಕೆ ಸರ್ಕಾರದ ವತಿಯಿಂದ ಮಂಜೂರಾದ ರೂ 25 ಲಕ್ಷ ಪರಿಹಾರದ ಚೆಕ್ ನ್ನು ಉಡುಪಿ ಜಿಲ್ಲಾಡಳಿತದ ವತಿಯಿಂದ ಹಸ್ತಾಂತರ ಮಾಡಲಾಯಿತು.
ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕುಚ್ಚೂರು ರಸ್ತೆಯಲ್ಲಿರುವ ಮೃತ ಚಿನ್ಮಯಿ ಶೆಟ್ಟಿ ಅವರ ತಾಯಿಯ ಹಿರಿಯರ ಮನೆಗೆ ತೆರಳಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ಎಸ್ ಪಿ ಹರಿರಾಮ್ ಶಂಕರ್, ಎ.ಸಿ ರಶ್ಮಿ ಮೂಲಕ ಚೆಕ್ ಹಸ್ತಾಂತರ ಮಾಡಲಾಯಿತು. ನೊಂದ ಕುಟುಂಬಕ್ಕೆ ಜಿಲ್ಲಾಧಿಕಾರಿ ಸಾಂತ್ವಾನ ಹೇಳಿದರು.
ಅವರು ಕರುಣಾಕರ ಶೆಟ್ಟಿ ಮತ್ತು ಪೂಜಾ ಶೆಟ್ಟಿ ಅವರ ಪುತ್ರಿಯಾಗಿದ್ದು, ಪೂಜಾ ಶೆಟ್ಟಿ ಅವರ ತಾಯಿ ಮನೆ ಹೆಬ್ರಿಯ ಇಂದಿರಾನಗರದ ಮದಗದಲ್ಲಿದೆ.
ಕುರುಣಾಕರ ಶೆಟ್ಟಿ ಅವರ ಕುಟುಂಬವು ಬೆಂಗಳೂರಿನ ತಿಪ್ಪಸಂದ್ರದಲ್ಲಿ ನೆಲೆಸಿದ್ದು, ರಜಾದಿನಗಳಲ್ಲಿ ಚಿನ್ಮಯಿ ಅವರು ಅಜ್ಜಿ ಮನೆಗೆ ಬುರುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಜ್ಯೋತಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡುತ್ತಿದ್ದ ಚಿನ್ಮಯಿ ಅವರು ಬಾಲ್ಯದಿಂದಲೇ ಪ್ರತಿಭಾನ್ವಿತೆಯಾಗಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…