ಮಂಗಳೂರು : ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಸಂತೆ ವ್ಯಾಪಾರಕ್ಕೆ ಅವಕಾಶ ಎಂದು ವಿಶ್ವ ಹಿಂದೂ ಪರಿಷತ್ ಬ್ಯಾನರ್ ಅಳವಡಿಸಿದೆ. ಇಂದಿನಿಂದ ಕಾವೂರು ಜಾತ್ರೆ ಆರಂಭಗೊಂಡಿದೆ. ಈ ಜಾತ್ರೆಯಲ್ಲಿ ವಿವಿಧ ಮತ ಧಾರ್ಮಿಕ ನಂಬಿಕೆಯುಳ್ಳ ವ್ಯಕ್ತಿಗಳು ಭಾಗವಹಿಸುವುದು, ಸಂತೆ ವ್ಯಾಪಾರ ಮಾಡುತ್ತಿರುವುದು ಹಿಂದಿನಿಂದಲೂ ನಡೆದುಬಂದಿದೆ.
ಆದರೆ ಜನವರಿ 10ರಂದು ‘ಮುಸ್ಲಿಮ್ ಧರ್ಮದವರು ಸಂತೆ ವ್ಯಾಪಾರ ಮಾಡುವುದಕ್ಕೆ ಬಹಿಷ್ಕಾರ ಹಾಕಲಾಗಿದೆ’ ಎಂಬ ಜನಾಂಗೀಯ ನಿಂದನೆಯ ಬ್ಯಾನರ್ ಅಳವಡಿಸಲಾಗಿತ್ತು. ಈ ಬಗ್ಗೆ ಸ್ಥಳೀಯ ಪೊಲೀಸರಿಗೆ, ಎಸಿಪಿಯವರ ಗಮನಕ್ಕೆ ತಂದ ಬಳಿಕ ಅದನ್ನು ತೆರವುಗೊಳಿಸಲಾಗಿತ್ತು. ಆದರೆ ನಿನ್ನೆ ಶುಕ್ರವಾರ ಮತ್ತೆ ಇದೇರೀತಿ ‘ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ. ವಿಗ್ರಹಾರಾಧನೆಯನ್ನು ‘ಹರಾಂ’ ಎಂದು ನಂಬಿರುವ ಯಾರಿಗೂ ಅವಕಾಶವಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾವೂರು ಪ್ರಖಂಡ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗಿದೆ.
Join our Whatsapp group by clicking the below link 👇👇
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…