ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ 370 ನೇ ವಿಧಿ ಕೇಂದ್ರ ಸರ್ಕಾರ ರದ್ದುಗೊಳಿಸಿದ ಬಳಿಕ ಭಾರತದ ವಿರುದ್ಧ ಯುದ್ಧ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಪಾಕಿಸ್ತಾನ ಇದೀಗ ಮತ್ತೆ ಬೆದರಿಕೆ ಹಾಕಿದೆ.
ಭಾರತ ಕಾಶ್ಮೀರದಲ್ಲಿ ದೌರ್ಜನ್ಯವೆಸಗುತ್ತಿದ್ದು, ಹಿಂದುತ್ವ ಹೇರುವ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಖ್ವಾಮರ್ ಜಾವೆದ್ ಬಾಜ್ವಾ ಹೇಳಿದ್ದಾರೆ.
ಹಿಂದುತ್ವ ಹಾಗೂ ದೌರ್ಜನ್ಯಗಳಿಗೆ ಕಾಶ್ಮೀರ ಬಲಿಪಶುವಾಗುತ್ತಿದೆ. ಕಾಶ್ಮೀರ ಪಾಕಿಸ್ತಾನದ ಅಜೆಂಡಾವಾಗಿದೆ. ಪ್ರಸ್ತುತ ಭಾರತ ಸರ್ಕಾರ ಕಾಶ್ಮೀರ ಕುರಿತಂತೆ ತೆಗೆದುಕೊಂಡಿರುವ ನಿರ್ಧಾರ ನಮಗೆ ಸವಾಲಾಗಿದೆ. ಕಾಶ್ಮೀರವನ್ನು ಒಬ್ಬಂಟಿಯಾಗಿ ಪಾಕಿಸ್ತಾನ ಎಂದಿಗೂ ಬಿಡುವುದಿಲ್ಲ. ಕಟ್ಟಕಡೆಯ ಯೋಧ, ಗುಂಡು ಹಾಗೂ ಉಸಿರು ಇರುವವರೆಗೂ ನಾವು ನಮ್ಮ ಕರ್ತವ್ಯವನ್ನು ನಿರ್ವಹಿಸುತ್ತೇವೆ. ಕಾಶ್ಮೀರಕ್ಕಾಗಿ ಪಾಕಿಸ್ತಾನ ಸೇನೆ ಯಾವುದೇ ಹಂತಕ್ಕೆ ಬೇಕಾದರೂ ಹೋಗುತ್ತದೆ. ಯುದ್ಧದ ಮೋಡ ಹಾಗೂ ಆತಂಕ ವಾತಾವರಣ ಸೃಷ್ಟಿಯಾಗಿದೆ. ಆದರೆ, ನಾವು ಶಾಂತಿಯನ್ನು ಬಯಸುತ್ತಿದ್ದೇವೆ. ಇಂದು ಕಾಶ್ಮೀರ ಆತಂಕದಲ್ಲಿ ಸುಡುತ್ತಿದೆ. ನಿಮ್ಮೊಂದಿಗೆ ನಾವಿದ್ದೇವೆಂಬುದನ್ನು ನಾನು ಕಾಶ್ಮೀರ ಜನತೆಗೆ ಭರವಸೆ ನೀಡುತ್ತೇನೆ. ಕಾಶ್ಮೀರಕ್ಕಾಗಿ ಯಾವುದೇ ಬಲಿದಾನಕ್ಕೂ ನಾವು ಸಿದ್ಧರಿದ್ದೇವೆಂದು ಹೇಳಿಕೊಂಡಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…