Featured

ಕಾಶ್ಮೀರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳತ್ತ ಅಂತರರಾಷ್ಟ್ರೀಯ ಸಮುದಾಯ ಗಮನಹರಿಸಬೇಕು : ಇಮ್ರಾನ್‌ ಖಾನ್‌ -Vishwanews24

ಇಸ್ಲಾಮಾಬಾದ್‌: ಕಾಶ್ಮೀರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳತ್ತ ಅಂತರರಾಷ್ಟ್ರೀಯ ಸಮುದಾಯ ಗಮನಹರಿಸಬೇಕು ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಹೇಳಿದ್ದಾರೆ.

ಕಾಶ್ಮೀರದಲ್ಲಿ ಭಾರತದ ಕ್ರಮವನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯಲಿವೆ. ಪ್ರತಿಭಟನೆ ನಡೆಸುವವರ ಮೇಲೆ ಭಾರತವು ದಾಳಿ ನಡೆಸಬಹುದು. ಇದು ಭಾರತ– ಪಾಕ್‌ ಮಧ್ಯೆ ಉದ್ವಿಗ್ನ ಸ್ಥಿತಿ ನಿರ್ಮಾಣಕ್ಕೆ ಕಾರಣವಾಗಬಹುದು. ಹೀಗಾದಾಗ ಪುಲ್ವಾಮಾ ಮಾದರಿಯ ಘಟನೆಗಳು ನಡೆದೇ ನಡೆಯುತ್ತವೆ. ಭಾರತವು ಅದರ ಆರೋಪವನ್ನು ನಮ್ಮ ಮೇಲೆ ಹೊರಿಸಿ ನಮ್ಮ ಮೇಲೆ ದಾಳಿ ನಡೆಸಬಹುದು. ಪ್ರತ್ಯುತ್ತರವಾಗಿ ನಾವೂ ದಾಳಿ ನಡೆಸಬೇಕಾಗುತ್ತದೆ ಎಂದು ಹೇಳಿದರು.

ಜಮ್ಮು ಕಾಶ್ಮೀರ ವಿಚಾರವಾಗಿ ಅಧಿವೇಶನದಲ್ಲಿ ಮಾತನಾಡಿದ ಅವರು, ಜಮ್ಮು ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ್ದರಿಂದ ಪುಲ್ವಾಮಾ ಮಾದರಿಯ ದಾಳಿ ನಡೆದು, ಭಾರತ– ಪಾಕಿಸ್ತಾನದ ಮಧ್ಯೆ ಪೂರ್ಣಪ್ರಮಾಣದ ಯುದ್ಧ ನಡೆಯುವ ಸಂಭವ ಇದೆ. ಈ ಯುದ್ಧದಲ್ಲಿ ಯಾರೂ ಗೆಲ್ಲಲಾರರು ಆದರೆ ಅದರ ಪರಿಣಾಮ ಜಾಗತಿಕ ಮಟ್ಟದಲ್ಲಿ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮೋದಿ ಅವರು ಮುಸ್ಲಿಂ ವಿರೋಧಿ ಕಾರ್ಯಸೂಚಿ ಜಾರಿ ಮಾಡುವ ಮೂಲಕ ಅಂತರರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸಿದ್ದಾರೆ. ಜಗತ್ತು ಈ ಕೂಡಲೇ ಭಾರತದ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ತಾವೇ ರಚಿಸಿದ ಕಾನೂನಿಗೆ ಗೌರವ ಕೊಡದೆ ಸುಮ್ಮನೆ ಕುಳಿತರೆ ಮುಂದೆ ಸಂಭವಿಸುವ ಬೆಳವಣಿಗೆಗಳಿಗೆ ನಾವು ಜವಾಬ್ದಾರರಾಗಿರುವುದಿಲ್ಲ. ಎರಡು ಅಣ್ವಸ್ತ್ರ ರಾಷ್ಟ್ರಗಳ ಮಧ್ಯೆ ನಡೆಯುವ ಯುದ್ಧದಲ್ಲಿ ಯಾರೂ ಗೆಲ್ಲಲಾರರು. ಆದರೆ ಪರಿಣಾಮ ಮಾತ್ರ ಜಾಗತಿಕ ಮಟ್ಟದಲ್ಲಾಗುವುದು. ನನ್ನ ಮಾತುಗಳನ್ನು ಅಣ್ವಸ್ತ್ರ ಬ್ಲ್ಯಾಕ್‌ಮೇಲ್ ಅಂತಾ ತಿಳಿಯಬಾರದು ಎಂದು ಹೇಳಿದರು.

 

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

11 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

11 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

11 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

12 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

15 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

15 hours ago