Featured

ಕಾಶ್ಮೀರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳತ್ತ ಅಂತರರಾಷ್ಟ್ರೀಯ ಸಮುದಾಯ ಗಮನಹರಿಸಬೇಕು : ಇಮ್ರಾನ್‌ ಖಾನ್‌ -Vishwanews24

ಇಸ್ಲಾಮಾಬಾದ್‌: ಕಾಶ್ಮೀರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳತ್ತ ಅಂತರರಾಷ್ಟ್ರೀಯ ಸಮುದಾಯ ಗಮನಹರಿಸಬೇಕು ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಹೇಳಿದ್ದಾರೆ.

ಕಾಶ್ಮೀರದಲ್ಲಿ ಭಾರತದ ಕ್ರಮವನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯಲಿವೆ. ಪ್ರತಿಭಟನೆ ನಡೆಸುವವರ ಮೇಲೆ ಭಾರತವು ದಾಳಿ ನಡೆಸಬಹುದು. ಇದು ಭಾರತ– ಪಾಕ್‌ ಮಧ್ಯೆ ಉದ್ವಿಗ್ನ ಸ್ಥಿತಿ ನಿರ್ಮಾಣಕ್ಕೆ ಕಾರಣವಾಗಬಹುದು. ಹೀಗಾದಾಗ ಪುಲ್ವಾಮಾ ಮಾದರಿಯ ಘಟನೆಗಳು ನಡೆದೇ ನಡೆಯುತ್ತವೆ. ಭಾರತವು ಅದರ ಆರೋಪವನ್ನು ನಮ್ಮ ಮೇಲೆ ಹೊರಿಸಿ ನಮ್ಮ ಮೇಲೆ ದಾಳಿ ನಡೆಸಬಹುದು. ಪ್ರತ್ಯುತ್ತರವಾಗಿ ನಾವೂ ದಾಳಿ ನಡೆಸಬೇಕಾಗುತ್ತದೆ ಎಂದು ಹೇಳಿದರು.

ಜಮ್ಮು ಕಾಶ್ಮೀರ ವಿಚಾರವಾಗಿ ಅಧಿವೇಶನದಲ್ಲಿ ಮಾತನಾಡಿದ ಅವರು, ಜಮ್ಮು ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ್ದರಿಂದ ಪುಲ್ವಾಮಾ ಮಾದರಿಯ ದಾಳಿ ನಡೆದು, ಭಾರತ– ಪಾಕಿಸ್ತಾನದ ಮಧ್ಯೆ ಪೂರ್ಣಪ್ರಮಾಣದ ಯುದ್ಧ ನಡೆಯುವ ಸಂಭವ ಇದೆ. ಈ ಯುದ್ಧದಲ್ಲಿ ಯಾರೂ ಗೆಲ್ಲಲಾರರು ಆದರೆ ಅದರ ಪರಿಣಾಮ ಜಾಗತಿಕ ಮಟ್ಟದಲ್ಲಿ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮೋದಿ ಅವರು ಮುಸ್ಲಿಂ ವಿರೋಧಿ ಕಾರ್ಯಸೂಚಿ ಜಾರಿ ಮಾಡುವ ಮೂಲಕ ಅಂತರರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸಿದ್ದಾರೆ. ಜಗತ್ತು ಈ ಕೂಡಲೇ ಭಾರತದ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ತಾವೇ ರಚಿಸಿದ ಕಾನೂನಿಗೆ ಗೌರವ ಕೊಡದೆ ಸುಮ್ಮನೆ ಕುಳಿತರೆ ಮುಂದೆ ಸಂಭವಿಸುವ ಬೆಳವಣಿಗೆಗಳಿಗೆ ನಾವು ಜವಾಬ್ದಾರರಾಗಿರುವುದಿಲ್ಲ. ಎರಡು ಅಣ್ವಸ್ತ್ರ ರಾಷ್ಟ್ರಗಳ ಮಧ್ಯೆ ನಡೆಯುವ ಯುದ್ಧದಲ್ಲಿ ಯಾರೂ ಗೆಲ್ಲಲಾರರು. ಆದರೆ ಪರಿಣಾಮ ಮಾತ್ರ ಜಾಗತಿಕ ಮಟ್ಟದಲ್ಲಾಗುವುದು. ನನ್ನ ಮಾತುಗಳನ್ನು ಅಣ್ವಸ್ತ್ರ ಬ್ಲ್ಯಾಕ್‌ಮೇಲ್ ಅಂತಾ ತಿಳಿಯಬಾರದು ಎಂದು ಹೇಳಿದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago