ನವದೆಹಲಿ : ಪಾಕಿಸ್ತಾನವು ತನ್ನದೇ ನೆಲದಲ್ಲಿರುವ, ದೇಶಭ್ರಷ್ಟರು ಎಂದು ಘೋಷಿಸಿರುವ ಮೊಹಾಜಿರ್, ಬಲೂಚ್, ಪಸ್ತೂನ್ ಮತ್ತು ಹಜ್ರಾ ನಾಗರಿಕರಿಗೆ ಮೊದಲು ನ್ಯಾಯ ಒದಗಿಸಲಿ ಅಲ್ಲಿಯವರೆಗೆ ಪಾಕ್ ಕಾಶ್ಮೀರದ ಪರವಾಗಿ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಮೊಹಾಜಿರ್ ಸಂಘಟನೆ ವಾಯ್ಸ್ ಆಫ್ ಕರಾಚಿಯ ಮುಖಂಡ ನದೀಂ ನುಸ್ರತ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ಮತ್ತು ವಿಶೇಷ ಸ್ಥಾನಮಾನ ಒದಗಿಸಿಕೊಡುತ್ತಿದ್ದ ಭಾರತೀಯ ಸಂವಿಧಾನದ 370 ಮತ್ತು 35 ಎ ವಿಧಿಗಳನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸೋಮವಾರ ರದ್ದಗೊಳಿಸಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ನದೀಂ, ಕಾಶ್ಮೀರದ ವಿಷಯದಲ್ಲಿ ಮಾತನಾಡುವ ನೈತಿಕ ಹಕ್ಕು ಪಾಕಿಸ್ತಾನಕ್ಕೆ ಇಲ್ಲ ಎಂದು ಹೇಳಿದ್ದಾರೆ.
ಪಾಕಿಸ್ತಾನ ತನ್ನದೇ ಜನರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಿದೆ. ಮಾನವ ಹಕ್ಕುಗಳನ್ನು ದಮನಗೊಳಿಸಿದೆ. ಹೀಗಿರುವಾಗ ಕಾಶ್ಮೀರದ ವಿಷಯವಾಗಿ ಜಾಗತಿಕ ವೇದಿಕೆಯಲ್ಲಿ ಪ್ರಶ್ನಿಸಲು ಅದಕ್ಕೆ ನೈತಿಕ ಹಕ್ಕು ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…