ನವದೆಹಲಿ: ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿರುವ ನಟಿ ಸಾಯಿ ಪಲ್ಲವಿ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಇತ್ತೀಚಿಗೆ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲಾದ ಹಲ್ಲೆಯನ್ನು ಹೋಲಿಸಿ ಯಾರನ್ನೂ ಧರ್ಮದ ಹೆಸರಲ್ಲಿ ಹಿಂಸಿಸಬಾರದೆಂದಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಸಾಯಿಪಲ್ಲವಿ ಅವರು ‘ಆ ಸಮಯದಲ್ಲಿ ಕಾಶ್ಮೀರಿ ಪಂಡಿತರನ್ನು ಹೇಗೆ ಕೊಲ್ಲಲಾಯಿತು ಎಂಬುದನ್ನು ಕಾಶ್ಮೀರಿ ಫೈಲ್ಸ್ ಸಿನಿಮಾದಲ್ಲಿ ತೋರಿಸಲಾಗಿದೆ. ನೀವು ಈ ವಿಷಯವನ್ನು ಧಾರ್ಮಿಕ ಸಂಘರ್ಷ ಎಂದು ಪರಿಗಣಿಸುತ್ತಿದ್ದರೆ, ಇತ್ತೀಚೆಗೆ ಗೋವುಗಳನ್ನು ಸಾಗಿಸುತ್ತಿದ್ದ ಮುಸ್ಲಿಂ ಚಾಲಕನನ್ನು ಥಳಿಸಿ ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಒತ್ತಾಯಿಸಿದ ಘಟನೆ ನಡೆದಿದೆ. ಹಾಗಾದರೆ ಈ ಎರಡು ಘಟನೆಗಳ ನಡುವಿನ ವ್ಯತ್ಯಾಸ ಎಲ್ಲಿದೆ’ ಎಂದು ಹೇಳಿದ್ದಾರೆ.
ನಟಿ ಸಾಯಿ ಪಲ್ಲವಿಯ ಮಾತಿಗೆ ಪರ ವಿರೋಧ ವ್ಯಕ್ತವಾಗಿದೆ. ಕೆಲವು ಟ್ವಿಟರ್ ಬಳಕೆದಾರರು ಆಕೆಯ ಧೈರ್ಯವನ್ನು ಶ್ಲಾಘಿಸಿದರೆ, ಇತರರು ಅವರನ್ನು ಟ್ರೋಲ್ ಮಾಡಿದ್ದಾರೆ. ಅವರ ರಾಜಕೀಯ ಒಲವಿನ ಬಗ್ಗೆ ಕೇಳಲಾದ ಪ್ರಶ್ನೆಗೆ, ತಾವು ತಟಸ್ಥ ಕುಟುಂಬದಲ್ಲಿ ಬೆಳೆದರು. ಮತ್ತು ನಮಗೆ ಉತ್ತಮ ಮನುಷ್ಯರಾಗಿ ಬದುಕಲು ಕಲಿಸಲಾಯಿತು. ನೋಯುತ್ತಿರುವವರನ್ನು ರಕ್ಷಿಸಬೇಕು ಎಂದು ನನಗೆ ಕಲಿಸಲಾಗಿದೆ, ದಮನಿತರನ್ನು ರಕ್ಷಿಸಬೇಕು ಎಂದು ಅವರು ಹೇಳಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…