ನವದೆಹಲಿ: ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿರುವ ನಟಿ ಸಾಯಿ ಪಲ್ಲವಿ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಇತ್ತೀಚಿಗೆ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲಾದ ಹಲ್ಲೆಯನ್ನು ಹೋಲಿಸಿ ಯಾರನ್ನೂ ಧರ್ಮದ ಹೆಸರಲ್ಲಿ ಹಿಂಸಿಸಬಾರದೆಂದಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಸಾಯಿಪಲ್ಲವಿ ಅವರು ‘ಆ ಸಮಯದಲ್ಲಿ ಕಾಶ್ಮೀರಿ ಪಂಡಿತರನ್ನು ಹೇಗೆ ಕೊಲ್ಲಲಾಯಿತು ಎಂಬುದನ್ನು ಕಾಶ್ಮೀರಿ ಫೈಲ್ಸ್ ಸಿನಿಮಾದಲ್ಲಿ ತೋರಿಸಲಾಗಿದೆ. ನೀವು ಈ ವಿಷಯವನ್ನು ಧಾರ್ಮಿಕ ಸಂಘರ್ಷ ಎಂದು ಪರಿಗಣಿಸುತ್ತಿದ್ದರೆ, ಇತ್ತೀಚೆಗೆ ಗೋವುಗಳನ್ನು ಸಾಗಿಸುತ್ತಿದ್ದ ಮುಸ್ಲಿಂ ಚಾಲಕನನ್ನು ಥಳಿಸಿ ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಒತ್ತಾಯಿಸಿದ ಘಟನೆ ನಡೆದಿದೆ. ಹಾಗಾದರೆ ಈ ಎರಡು ಘಟನೆಗಳ ನಡುವಿನ ವ್ಯತ್ಯಾಸ ಎಲ್ಲಿದೆ’ ಎಂದು ಹೇಳಿದ್ದಾರೆ.
ನಟಿ ಸಾಯಿ ಪಲ್ಲವಿಯ ಮಾತಿಗೆ ಪರ ವಿರೋಧ ವ್ಯಕ್ತವಾಗಿದೆ. ಕೆಲವು ಟ್ವಿಟರ್ ಬಳಕೆದಾರರು ಆಕೆಯ ಧೈರ್ಯವನ್ನು ಶ್ಲಾಘಿಸಿದರೆ, ಇತರರು ಅವರನ್ನು ಟ್ರೋಲ್ ಮಾಡಿದ್ದಾರೆ. ಅವರ ರಾಜಕೀಯ ಒಲವಿನ ಬಗ್ಗೆ ಕೇಳಲಾದ ಪ್ರಶ್ನೆಗೆ, ತಾವು ತಟಸ್ಥ ಕುಟುಂಬದಲ್ಲಿ ಬೆಳೆದರು. ಮತ್ತು ನಮಗೆ ಉತ್ತಮ ಮನುಷ್ಯರಾಗಿ ಬದುಕಲು ಕಲಿಸಲಾಯಿತು. ನೋಯುತ್ತಿರುವವರನ್ನು ರಕ್ಷಿಸಬೇಕು ಎಂದು ನನಗೆ ಕಲಿಸಲಾಗಿದೆ, ದಮನಿತರನ್ನು ರಕ್ಷಿಸಬೇಕು ಎಂದು ಅವರು ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…