ನವದೆಹಲಿ:ಜಮ್ಮು ಮತ್ತು ಕಾಶ್ಮೀರ ವಿಚಾರವಾಗಿ ಭಾರತದ ವಿರುದ್ಧ ಕಿಡಿಕಾರುತ್ತಿರುವ ಪಾಕಿಸ್ತಾನಕ್ಕೆ ಕ್ರಿಕೆಟಿಗ ಶಿಖರ್ ಧವನ್ ಖಡಕ್ ತಿರುಗೇಟು ನೀಡಿದ್ದು, ಭಾರತದ ವಿರುಗ್ಧ ಬೊಟ್ಟು ಮಾಡಿ ತೋರಿಸುವ ಮುನ್ನ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದು ತಿರುಗೇಟು ನೀಡಿದ್ದಾರೆ
ಖಾಸಗಿ ವಾಹಿನಿಯ ಆಪ್ ಕಿ ಅದಾಲತ್ ಕಾರ್ಯಕ್ರಮದಲ್ಲಿ ಭಾರತದ ಆಂತರಿಕ ವ್ಯವಹಾರಗಳ ಬಗ್ಗೆ ಪಾಕಿಸ್ತಾನ ಸಲಹೆ ನೀಡಿರುವ ಕುರಿತಾಗಿ ಮಾತನಾಡಿರುವ ಧವನ್, ‘ಬೇರೆಯವರ ಬಗ್ಗೆ ಮಾತನಾಡುವ ಮೊದಲು ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಖಡಕ್ ಉತ್ತರ ನೀಡಿದ್ದಾರೆ.
ಇದೇ ವೇಳೆ ಕಾಶ್ಮೀರ ನಮ್ಮ ಆಂತರಿಕ ವಿಚಾರ ಎಂದು ಹೇಳಿರುವ ಧವನ್, ಈ ಕುರಿತಂತೆ ಬೇರೆಯವ ಉಪದೇಶ ನಮಗೆ ಬೇಕಿಲ್ಲ. ತಾಯ್ನಾಡಿನ ಕುರಿತಾಗಿ ವಿದೇಶಿಗರು ಮಾತನಾಡಿದರೆ ಖಂಡಿತವಾಗಿಯೂ ತಾವು ಅದನ್ನು ವಿರೋಧಿಸುತ್ತೇವೆ ಎಂದು ಹೇಳಿದರು.
‘ಯಾರೋ ಒಬ್ಬರು ನಮ್ಮ ದೇಶದ ಕುರಿತಾಗಿ ಇಲ್ಲಸಲ್ಲದನ್ನು ಮಾತನಾಡಿದರೆ ಖಂಡಿತವಾಗಿಯೂ ಅವರ ವಿರುದ್ಧವಾಗಿ ನಿಲ್ಲುತ್ತೇವೆ. ಬೇರೊಬ್ಬರು ನಮಗೆ ಸಲಹೆ ನೀಡುವ ಅಗತ್ಯ ಖಂಡಿತವಾಗಿಯೂ ಇಲ್ಲ. ಮೊದಲು ನಿಮ್ಮ ದೇಶದಲ್ಲಿರುವ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಿ ಬಳಿಕ ಬೇರೆಯವರ ಬಗ್ಗೆ ಮಾತನಾಡಿ. ಒಂದು ಗಾದೆ ಮಾತಿದೆ, ಯಾರ ಮನೆ ಗಾಜಿನಿಂದ ಮಾಡಿರುವುದ್ದಾಗಿರುತ್ತೋ ಅವರು ಬೇರೆಯವರ ಮನೆಯ ಮೇಲೆ ಕಲ್ಲೆಸೆಯುವುದಿಲ್ಲ ಎಂದು ಗಬ್ಬರ್ ಖ್ಯಾತಿ ಧವನ್ ತಮ್ಮದೇ ಶೈಲಿಯಲ್ಲಿ ಪಾಕಿಸ್ತಾನವನ್ನು ಟೀಕಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…