ನವದೆಹಲಿ : ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯಿಬ್ ಅಖ್ತರ್ ‘ಗಜ್ವಾ-ಎ-ಹಿಂದ್’ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ನಾವು ಮೊದಲು ಕಾಶ್ಮೀರವನ್ನು ವಶಪಡಿಸಿಕೊಂಡು ನಂತರ ಭಾರತದ ಮೇಲೆ ಘಜ್ವಾ ಎ ಹಿಂದ್ ಗಾಗಿ ಎಲ್ಲ ಕಡೆಯಿಂದ ದಾಳಿ ಮಾಡುತ್ತೇವೆ ಎಂದು ಶೋಯಿಬ್ ಅಖ್ತರ್ ಹೇಳಿದ್ದಾರೆ.
ಸಾಮಾ ಟಿವಿ ಯೊಂದಿಗೆ ಮಾತನಾಡುವಾಗ ಈ ಹೇಳಿಕೆ ನೀಡಿದ್ದಾರೆ. ಅಖ್ತರ್ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಖ್ತರ್ ಭಾರತದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮೊದಲ ಕ್ರಿಕೆಟಿಗ ಅಲ್ಲ. ಇದಕ್ಕೂ ಮೊದಲು ಶಾಹಿದ್ ಅಫ್ರಿದಿ ಮತ್ತು ಜಾವೇದ್ ಮಿಯಾಂದ್ ರಂತಹ ಕ್ರಿಕೆಟಿಗರು ಭಾರತದ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.
ಸಾಮಾ ಟಿವಿಗೆ ನೀಡಿದ ಸಂದರ್ಶನದಲ್ಲಿ ಶೋಯಿಬ್ ‘ಗಜ್ವಾ-ಎ-ಹಿಂದ್’ ಬಗ್ಗೆ ಮಾತನಾಡುತ್ತಿರುವದೃಶ್ಯವಿದೆ. ಗಜ್ವಾ-ಎ-ಹಿಂದ್ ಎಂದರೆ ‘ಭಾರತದ ವಿರುದ್ಧ ಧರ್ಮ ಯುದ್ಧ’ ಎಂದರ್ಥ. ‘ನಮ್ಮ ಧರ್ಮಗ್ರಂಥಗಳಲ್ಲಿ ಘಜ್ವಾ-ಎ-ಹಿಂದ್ ನಡೆಯುತ್ತದೆ ಮತ್ತು ಅಟೊಕ್ ನದಿಯು ಎರಡು ಬಾರಿ ಕೆಂಪು ಬಣ್ಣದಲ್ಲಿ ಇರುತ್ತದೆ ಎಂದು ಬರೆಯಲಾಗಿದೆ. ಅಫ್ಘಾನಿಸ್ತಾನದಿಂದ ಪಡೆಗಳು ಅಟೊಕ್ ವರೆಗೆ ತಲುಪುತ್ತವೆ. ಶಾಮಲ್ ಮಶ್ರಿಕ್ ನಿಂದ ಆ ಪಡೆಗಳು ಉದಯಿಸಿದ ನಂತರ, ಉಜ್ಬೇಕಿಸ್ತಾನದಿಂದ ವಿವಿಧ ತುಕಡಿಗಳು ಬರುತ್ತವೆ. ಇವೆಲ್ಲವೂ ಲಾಹೋರ್ ನ ಐತಿಹಾಸಿಕ ಪ್ರದೇಶವಾದ ಖೋರಾಸನ್ ಅನ್ನು ಉಲ್ಲೇಖಿಸುತ್ತದೆ’ ಎಂದು ಅಖ್ತರ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…
ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…
ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…
ಉಡುಪಿ : ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಬಸ್ ಕಂಡಕ್ಟರ್ ಬಂಧನ ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ…