Featured

ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನದ ಜೊತೆಗೆ ಮಾತುಕತೆಯೇ ಇಲ್ಲ : ಎಸ್‌. ಜೈಶಂಕರ್‌ -Vishwanews24

ನವದೆಹಲಿ: ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರವು (ಪಿಒಕೆ) ಭಾರತಕ್ಕೆ ಸೇರಿದ ಭೂಭಾಗ. ಭಾರತವು ಮುಂದೊಂದು ದಿನ ಈ ಪ್ರದೇಶದ ಮೇಲೆ ನಿಯಂತ್ರಣ ಸಾಧಿಸುತ್ತದೆ ಎಂಬ ವಿಶ್ವಾಸವಿದೆ’ ಎಂದು ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್‌. ಜೈಶಂಕರ್‌ ಮಂಗಳವಾರ ಹೇಳಿದರು.

ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಬಗ್ಗೆ ಭಾರತದ ನಿಲುವು ಹಿಂದಿನಿಂದಲೂ ಸ್ಪಷ್ಟವಾಗಿದೆ ಎಂದರು.

‘ಒಂದು ನೆರೆರಾಷ್ಟ್ರವು ಭಾರತಕ್ಕೆ ವಿಶೇಷವಾದ ಸವಾಲುಗಳನ್ನು ಒಡ್ಡುತ್ತಿದೆ. ಆ ರಾಷ್ಟ್ರವು ಗಡಿಯಾಚಿ ನಿಂದ ಭಯೋತ್ಪಾದನಾ ಕೃತ್ಯ ನಡೆಸುವು
ದನ್ನು ನಿಲ್ಲಿಸುವವರೆಗೂ ಆ ಸವಾಲು ಮುಂದುವರಿಯಲಿದೆ’ ಎಂದು ಪಾಕಿಸ್ತಾನವನ್ನು ಉಲ್ಲೇಖಿಸದೆ ಹೇಳಿದರು.

‘ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನದ ಜೊತೆಗೆ ಮಾತುಕತೆಯೇ ಇಲ್ಲ. ಬದಲಿಗೆ, ಭಯೋತ್ಪಾದನೆಯೇ ಮುಖ್ಯ ವಿಷಯವಾಗಬೇಕು. ನೆರೆರಾಷ್ಟ್ರವೊಂದು ನಮ್ಮ ದೇಶದೊಳಗೆ ಭಯೋತ್ಪಾಕ ಕೃತ್ಯಗಳನ್ನು ನಡೆಸುತ್ತಿದ್ದರೂ ಆ ರಾಷ್ಟ್ರದ ಜೊತೆ ಮಾತುಕತೆಗೆ ಮುಂದಾಗುವ ಯಾವುದಾದರೂ ರಾಷ್ಟ್ರ ವಿಶ್ವದಲ್ಲಿ ಇದೆಯೇ? ನಮ್ಮ ನಿಲುವು ಅತ್ಯಂತ ಸ್ಪಷ್ಟವಾಗಿದೆ. ಅಸಹಜತೆ ಇರುವುದು ಅವರ ನಡತೆಯಲ್ಲಿ’ ಎಂದು ಜೈಶಂಕರ್‌ ಹೇಳಿದರು.

 

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

4 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

5 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

5 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

5 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

8 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

8 hours ago