ನವದೆಹಲಿ: ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರವು (ಪಿಒಕೆ) ಭಾರತಕ್ಕೆ ಸೇರಿದ ಭೂಭಾಗ. ಭಾರತವು ಮುಂದೊಂದು ದಿನ ಈ ಪ್ರದೇಶದ ಮೇಲೆ ನಿಯಂತ್ರಣ ಸಾಧಿಸುತ್ತದೆ ಎಂಬ ವಿಶ್ವಾಸವಿದೆ’ ಎಂದು ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್. ಜೈಶಂಕರ್ ಮಂಗಳವಾರ ಹೇಳಿದರು.
ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಬಗ್ಗೆ ಭಾರತದ ನಿಲುವು ಹಿಂದಿನಿಂದಲೂ ಸ್ಪಷ್ಟವಾಗಿದೆ ಎಂದರು.
‘ಒಂದು ನೆರೆರಾಷ್ಟ್ರವು ಭಾರತಕ್ಕೆ ವಿಶೇಷವಾದ ಸವಾಲುಗಳನ್ನು ಒಡ್ಡುತ್ತಿದೆ. ಆ ರಾಷ್ಟ್ರವು ಗಡಿಯಾಚಿ ನಿಂದ ಭಯೋತ್ಪಾದನಾ ಕೃತ್ಯ ನಡೆಸುವು
ದನ್ನು ನಿಲ್ಲಿಸುವವರೆಗೂ ಆ ಸವಾಲು ಮುಂದುವರಿಯಲಿದೆ’ ಎಂದು ಪಾಕಿಸ್ತಾನವನ್ನು ಉಲ್ಲೇಖಿಸದೆ ಹೇಳಿದರು.
‘ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನದ ಜೊತೆಗೆ ಮಾತುಕತೆಯೇ ಇಲ್ಲ. ಬದಲಿಗೆ, ಭಯೋತ್ಪಾದನೆಯೇ ಮುಖ್ಯ ವಿಷಯವಾಗಬೇಕು. ನೆರೆರಾಷ್ಟ್ರವೊಂದು ನಮ್ಮ ದೇಶದೊಳಗೆ ಭಯೋತ್ಪಾಕ ಕೃತ್ಯಗಳನ್ನು ನಡೆಸುತ್ತಿದ್ದರೂ ಆ ರಾಷ್ಟ್ರದ ಜೊತೆ ಮಾತುಕತೆಗೆ ಮುಂದಾಗುವ ಯಾವುದಾದರೂ ರಾಷ್ಟ್ರ ವಿಶ್ವದಲ್ಲಿ ಇದೆಯೇ? ನಮ್ಮ ನಿಲುವು ಅತ್ಯಂತ ಸ್ಪಷ್ಟವಾಗಿದೆ. ಅಸಹಜತೆ ಇರುವುದು ಅವರ ನಡತೆಯಲ್ಲಿ’ ಎಂದು ಜೈಶಂಕರ್ ಹೇಳಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…