ಇಸ್ಲಾಮಾಬಾದ್: ಕಾಶ್ಮೀರಕ್ಕಾಗಿ ನಾವು ಏನು ಮಾಡಲು ಕೂಡ ಸಿದ್ದವಾಗಿದ್ದೇವೆ, ಕಾಶ್ಮೀರದ ವಿಷಯ ಕುರಿತಾಗಿ ನಾವು ಮಾತನಾಡಲಿ ಸಿದ್ಧವಿದ್ದು, ಭಾರತ ಒಪ್ಪುತ್ತಿಲ್ಲ. ಪದೇ ಪದೇ ನಮ್ಮ ಮೇಲೆ ಆರೋಪಗಳನ್ನು ಮಾಡುತ್ತಾ ಬಂದಿದ್ದು, ನಮ್ಮನ್ನು ಬ್ಲ್ಯಾಕ್ ಲಿಸ್ಟ್ ಗೆ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆರೋಪಿಸಿದ್ದಾರೆ.
ಪಾಕ್ ಪ್ರಧಾನಿ ಭಾರತಕ್ಕೆ ನೇರವಾಗಿಯೇ ಪರಮಾಣು ಬೆದರಿಕೆ ಹಾಕಿದ್ದು, ಭಾರತ ನಮ್ಮನ್ನು ದಿವಾಳಿಯಾಗಿಸಲು ಪ್ರಯತ್ನಿಸಿದೆ ಎಂದು ಆರೋಪಿಸಿದ್ದಾರೆ.
ಕಾಶ್ಮೀರ ವಿಚಾರವಾಗಿ ಪರಮಾಣು ಅಸ್ತ್ರ ಸಹಿತ ಪಾಕಿಸ್ತಾನ ಯಾವುದೇ ಹಂತಕ್ಕೂ ಹೋಗಲು ಸಿದ್ದ ಎಂದು ಹೇಳುವ ಮೂಲಕ ಮತ್ತೊಮ್ಮೆ ಕಾಶ್ಮೀರದ ಬಗ್ಗೆ ಮಾತನಾಡಿರುವ ಇಮ್ರಾನ್ ಖಾನ್, ಕಾಶ್ಮೀರ ವಿಚಾರವಾಗಿ ನಿರ್ಧರಿಸುವ ಸಮಯ ಬಂದಿದ್ದು, ನಿರ್ಣಾಯಕ ತೀರ್ಮಾನ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ.
ಕಾಶ್ಮೀರ ವಿಚಾರವಾಗಿ ಭಾರತದೊಂದಿಗೆ ಮಾತುಕತೆ ನಡೆಸಿದಾಗ ಭಯೋತ್ಪಾದನೆ ಬಗ್ಗೆ ಆರೋಪ ಮಾಡಿತು. ಭಯೋತ್ಪಾದನೆ ಹರಡಿದೆ ಎಂದು ನಮ್ಮ ಮೇಲೆ ಆರೋಪ ಹೊರಿಸಲು ಭಾರತವು ಅವಕಾಶವನ್ನು ಹುಡುಕುತ್ತಲೇ ಇದೆ. ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವ ಮೂಲಕ ಭಾರತ ದೊಡ್ಡ ತಪ್ಪು ಮಾಡಿದೆ. ಕಾಶ್ಮೀರ ವಿಚಾರವಾಗಿ ಪರಮಾಣು ಅಸ್ತ್ರ ಸಹಿತ ಪಾಕಿಸ್ತಾನ ಯಾವುದೇ ಹಂತಕ್ಕೂ ಹೋಗಲು ಸಿದ್ದ ಎಂದು ಎಚ್ಚರಿಸಿದ್ದಾರೆ.
ಭಾರತವನ್ನು ಹಿಂದೂಗಳ ರಾಷ್ಟ್ರವನ್ನಾಗಿ ಮಾಡಲು ಅರ್ ಎಸ್ ಎಸ್ ಪ್ರಯತ್ನಿಸುತ್ತಿದೆ, ಪ್ರಧಾನಿ ನರೇಂದ್ರ ಮೋದಿಯವರ ಒಂದು ತಪ್ಪಿನಿಂದ ಕಾಶ್ಮೀರಿಗರಿಗೆ ಸ್ವಾತಂತ್ರ್ಯದ ದೊಡ್ಡ ಅವಕಾಶ ಲಭಿಸಿದೆ. ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ನಿರ್ಧಾರದಿಂದ ಈ ವಿಚಾರ ಅಂತರಾಷ್ಟ್ರೀಯ ವಿಷಯವಾಗಿ ಬದಲಾಗಿದೆ ಎಂದರು.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…