ಇಸ್ಲಾಮಾಬಾದ್: ಕಾಶ್ಮೀರಕ್ಕಾಗಿ ನಾವು ಏನು ಮಾಡಲು ಕೂಡ ಸಿದ್ದವಾಗಿದ್ದೇವೆ, ಕಾಶ್ಮೀರದ ವಿಷಯ ಕುರಿತಾಗಿ ನಾವು ಮಾತನಾಡಲಿ ಸಿದ್ಧವಿದ್ದು, ಭಾರತ ಒಪ್ಪುತ್ತಿಲ್ಲ. ಪದೇ ಪದೇ ನಮ್ಮ ಮೇಲೆ ಆರೋಪಗಳನ್ನು ಮಾಡುತ್ತಾ ಬಂದಿದ್ದು, ನಮ್ಮನ್ನು ಬ್ಲ್ಯಾಕ್ ಲಿಸ್ಟ್ ಗೆ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆರೋಪಿಸಿದ್ದಾರೆ.
ಪಾಕ್ ಪ್ರಧಾನಿ ಭಾರತಕ್ಕೆ ನೇರವಾಗಿಯೇ ಪರಮಾಣು ಬೆದರಿಕೆ ಹಾಕಿದ್ದು, ಭಾರತ ನಮ್ಮನ್ನು ದಿವಾಳಿಯಾಗಿಸಲು ಪ್ರಯತ್ನಿಸಿದೆ ಎಂದು ಆರೋಪಿಸಿದ್ದಾರೆ.
ಕಾಶ್ಮೀರ ವಿಚಾರವಾಗಿ ಪರಮಾಣು ಅಸ್ತ್ರ ಸಹಿತ ಪಾಕಿಸ್ತಾನ ಯಾವುದೇ ಹಂತಕ್ಕೂ ಹೋಗಲು ಸಿದ್ದ ಎಂದು ಹೇಳುವ ಮೂಲಕ ಮತ್ತೊಮ್ಮೆ ಕಾಶ್ಮೀರದ ಬಗ್ಗೆ ಮಾತನಾಡಿರುವ ಇಮ್ರಾನ್ ಖಾನ್, ಕಾಶ್ಮೀರ ವಿಚಾರವಾಗಿ ನಿರ್ಧರಿಸುವ ಸಮಯ ಬಂದಿದ್ದು, ನಿರ್ಣಾಯಕ ತೀರ್ಮಾನ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ.
ಕಾಶ್ಮೀರ ವಿಚಾರವಾಗಿ ಭಾರತದೊಂದಿಗೆ ಮಾತುಕತೆ ನಡೆಸಿದಾಗ ಭಯೋತ್ಪಾದನೆ ಬಗ್ಗೆ ಆರೋಪ ಮಾಡಿತು. ಭಯೋತ್ಪಾದನೆ ಹರಡಿದೆ ಎಂದು ನಮ್ಮ ಮೇಲೆ ಆರೋಪ ಹೊರಿಸಲು ಭಾರತವು ಅವಕಾಶವನ್ನು ಹುಡುಕುತ್ತಲೇ ಇದೆ. ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವ ಮೂಲಕ ಭಾರತ ದೊಡ್ಡ ತಪ್ಪು ಮಾಡಿದೆ. ಕಾಶ್ಮೀರ ವಿಚಾರವಾಗಿ ಪರಮಾಣು ಅಸ್ತ್ರ ಸಹಿತ ಪಾಕಿಸ್ತಾನ ಯಾವುದೇ ಹಂತಕ್ಕೂ ಹೋಗಲು ಸಿದ್ದ ಎಂದು ಎಚ್ಚರಿಸಿದ್ದಾರೆ.
ಭಾರತವನ್ನು ಹಿಂದೂಗಳ ರಾಷ್ಟ್ರವನ್ನಾಗಿ ಮಾಡಲು ಅರ್ ಎಸ್ ಎಸ್ ಪ್ರಯತ್ನಿಸುತ್ತಿದೆ, ಪ್ರಧಾನಿ ನರೇಂದ್ರ ಮೋದಿಯವರ ಒಂದು ತಪ್ಪಿನಿಂದ ಕಾಶ್ಮೀರಿಗರಿಗೆ ಸ್ವಾತಂತ್ರ್ಯದ ದೊಡ್ಡ ಅವಕಾಶ ಲಭಿಸಿದೆ. ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ನಿರ್ಧಾರದಿಂದ ಈ ವಿಚಾರ ಅಂತರಾಷ್ಟ್ರೀಯ ವಿಷಯವಾಗಿ ಬದಲಾಗಿದೆ ಎಂದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…