ಹುಬ್ಬಳ್ಳಿ : ಕೆಎಲ್ ಇ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹುಬ್ಬಳ್ಳಿ ನ್ಯಾಯಾಲಯ ಇಂದು ವಜಾಗೊಳಿಸಿದೆ.
ಹುಬ್ಬಳ್ಳಿಯ 5ನೇ ಅಪರ ಜಿಲ್ಲಾ ಕೋರ್ಟ್ ನ ನ್ಯಾಯಮೂರ್ತಿ ಕೆ.ಎನ್.ಗಂಗಾಧರ ಅವರು ಈ ಹಿಂದೆ ಅರ್ಜಿಯ ವಿಚಾರಣೆ ನಡೆಸಿ ಇಂದಿಗೆ ತೀರ್ಪು ಕಾಯ್ದಿರಿಸಿದ್ದರು. ಇಂದು ಎಲ್ಲ ರೀತಿಯ ಪರಿಶೀಲನೆ ನಡೆಸಿದ ನ್ಯಾಯಮೂರ್ತಿಗಳು, ಕಾಶ್ಮೀರಿ ವಿದ್ಯಾರ್ಥಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಮಾರ್ಚ್ 5ರಂದು ಕಾಶ್ಮೀರದ ಮೂವರು ವಿದ್ಯಾರ್ಥಿಗಳ ದೇಶದ್ರೋಹಿ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪರ ವಾದ ಮಂಡಿಸಲು ಹುಬ್ಬಳ್ಳಿಯ ವಕೀಲರು ಹಿಂದೇಟು ಹಾಕಿದ್ದರು. ನಂತರ ಬೆಂಗಳೂರಿನಿಂದ ಆಗಮಿಸಿದ ವಕೀಲರು ಆರೋಪಿಗಳ ಪರ ವಾದಮಂಡನೆ ಮಾಡಿದರು. ಮೈತ್ರೇಯಿ ಕೃಷ್ಣನ್ ನೇತೃತ್ವದ ಹತ್ತು ಜನ ವಕೀಲರ ತಂಡದಿಂದ ವಾದ ಮಂಡನೆ ಮಾಡಲಾಗಿತ್ತು. ಹಲವು ಪ್ರಕರಣಗಳ ಉದಾಹರಣೆ ಮೂಲಕ ಬೆಂಗಳೂರಿನ ವಕೀಲರ ತಂಡ ವಾದ ಮಂಡನೆ ಮಾಡಿತ್ತು. ಆದರೆ, ಕೋರ್ಟ್ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ….
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…