ಬ್ಯಾಂಕಾಕ್:ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಭಾರತವು ಮಾತುಕತೆ ನಡೆಸುವುದಿದ್ದರೆ ಅದು ಪಾಕಿಸ್ತಾನದ ಜೊತೆಗೆ ಮಾತ್ರ. ಮಧ್ಯಸ್ಥಿಕೆಗೆ ಮತ್ತೊಬ್ಬರ ಅಗತ್ಯವಿಲ್ಲ. ಇದು ಭಾರತ ಮತ್ತು ಪಾಕಿಸ್ತಾನಕ್ಕೆ ಮಾತ್ರ ಸಂಬಂಧಿಸಿದ ದ್ವಿಪಕ್ಷೀಯ ವಿಚಾರ’ ಎಂದು ಭಾರತ ಸರ್ಕಾರ ಅಮೆರಿಕಕ್ಕೆ ಮತ್ತೊಮ್ಮೆ ಸ್ಪಷ್ಪಪಡಿಸಿದೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ‘ಕಾಶ್ಮೀರ ವಿವಾದ ಪರಿಹಾರಕ್ಕಾಗಿ ಎರಡೂ ದೇಶಗಳ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ಧ’ ಎಂದು ಶುಕ್ರವಾರ ಮುಂಜಾನೆ ಮತ್ತೊಮ್ಮೆ ಹೇಳಿದ್ದರು. ಟ್ರಂಪ್ ಹೇಳಿಕೆ ಬಹಿರಂಗಗೊಂಡ ಕೆಲವೇ ಗಂಟೆಗಳಲ್ಲಿ ಭಾರತ ತನ್ನ ನಿಲುವನ್ನು ಪುನರುಚ್ಚರಿಸಿದೆ.
ಆಸಿಯಾನ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಬ್ಯಾಂಕಾಕ್ಗೆ ತೆರಳಿರುವ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್.ಜೈಂಕರ್ ಭಾರತ ಸರ್ಕಾರದ ನಿಲುವನ್ನು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಅವರನ್ನು ಭೇಟಿಯಾಗಿ ‘ಕಾಶ್ಮೀರದ ಬಗ್ಗೆ ಭಾರತವು ಮಾತುಕತೆ ನಡೆಸುವುದಿದ್ದರೆ ಅದು ಪಾಕಿಸ್ತಾನದ ಜೊತೆಗೆ ಮಾತ್ರ’ ಎನ್ನುವ ನಮ್ಮ (ಭಾರತದ) ನಿಲುವನ್ನು ಸ್ಪಷ್ಟಪಡಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…