ಬ್ಯಾಂಕಾಕ್:ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಭಾರತವು ಮಾತುಕತೆ ನಡೆಸುವುದಿದ್ದರೆ ಅದು ಪಾಕಿಸ್ತಾನದ ಜೊತೆಗೆ ಮಾತ್ರ. ಮಧ್ಯಸ್ಥಿಕೆಗೆ ಮತ್ತೊಬ್ಬರ ಅಗತ್ಯವಿಲ್ಲ. ಇದು ಭಾರತ ಮತ್ತು ಪಾಕಿಸ್ತಾನಕ್ಕೆ ಮಾತ್ರ ಸಂಬಂಧಿಸಿದ ದ್ವಿಪಕ್ಷೀಯ ವಿಚಾರ’ ಎಂದು ಭಾರತ ಸರ್ಕಾರ ಅಮೆರಿಕಕ್ಕೆ ಮತ್ತೊಮ್ಮೆ ಸ್ಪಷ್ಪಪಡಿಸಿದೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ‘ಕಾಶ್ಮೀರ ವಿವಾದ ಪರಿಹಾರಕ್ಕಾಗಿ ಎರಡೂ ದೇಶಗಳ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ಧ’ ಎಂದು ಶುಕ್ರವಾರ ಮುಂಜಾನೆ ಮತ್ತೊಮ್ಮೆ ಹೇಳಿದ್ದರು. ಟ್ರಂಪ್ ಹೇಳಿಕೆ ಬಹಿರಂಗಗೊಂಡ ಕೆಲವೇ ಗಂಟೆಗಳಲ್ಲಿ ಭಾರತ ತನ್ನ ನಿಲುವನ್ನು ಪುನರುಚ್ಚರಿಸಿದೆ.
ಆಸಿಯಾನ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಬ್ಯಾಂಕಾಕ್ಗೆ ತೆರಳಿರುವ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್.ಜೈಂಕರ್ ಭಾರತ ಸರ್ಕಾರದ ನಿಲುವನ್ನು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಅವರನ್ನು ಭೇಟಿಯಾಗಿ ‘ಕಾಶ್ಮೀರದ ಬಗ್ಗೆ ಭಾರತವು ಮಾತುಕತೆ ನಡೆಸುವುದಿದ್ದರೆ ಅದು ಪಾಕಿಸ್ತಾನದ ಜೊತೆಗೆ ಮಾತ್ರ’ ಎನ್ನುವ ನಮ್ಮ (ಭಾರತದ) ನಿಲುವನ್ನು ಸ್ಪಷ್ಟಪಡಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…