ಕಾಶ್ಮೀರ ಸಮಸ್ಯೆಯನ್ನು ಮಾತುಕತೆ ಮೂಲಕವೇ ಬಗೆಹರಿಸುಕೊಳ್ಳುತ್ತೇವೆ ಅದಕ್ಕೆ ಅಮೇರಿಕಾ ಮಧ್ಯಸ್ಥಿಕೆ ಅಗತ್ಯವಿಲ್ಲ : ಟ್ರಂಪ್ ಗೆ ಭಾರತ -Vishwanews24
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಒಪ್ಪಿದರೆ ದಶಕಗಳಷ್ಟು ಹಳೆಯದಾದ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಸಲಹೆಯನ್ನು ಭಾರತ ತಿರಸ್ಕರಿಸಿದೆ.
ಭಾರತ, ಪಾಕಿಸ್ತಾನ ನಡುವಿನ ಎಲ್ಲಾ ಸಮಸ್ಯೆಗಳನ್ನು ಕೇವಲ ದ್ವಿಪಕ್ಷೀಯ ಮಾತುಕತೆ ಮೂಲಕವೇ ಬಗೆಹರಿಸಿಕೊಳ್ಳುವುದಾಗಿ ಭಾರತ ಸ್ಪಷ್ಟಪಡಿಸಿದೆ.
ಅಮೆರಿಕ ಪ್ರವಾಸದಲ್ಲಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಶ್ವೇತ ಭವನದಲ್ಲಿ ಟ್ರಂಪ್ ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಕಾಶ್ಮೀರ ವಿವಾದ ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ತಿಳಿಸಿದ್ದರು.
ಅಮೇರಿಕ ಪ್ರವಾಸದಲ್ಲಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಶ್ವೇತ ಭವನದಲ್ಲಿ ಟ್ರಂಪ್ ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಭಾರತವೇ ಆಹ್ವಾನ ನೀಡಿದಂತೆ, “ಕಾಶ್ಮೀರ ವಿವಾದ ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಹಿಸಲು ಸಿದ್ಧ” ಎಂದು ತಿಳಿಸಿದ್ದರು. ಈ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬುತ್ತಿದ್ದಂತೆ ವಿದೇಶಾಂಗ ಇಲಾಖೆ ಸ್ಪಷ್ಟನೆ ನೀಡಿದೆ. ಭಾರತ, ಪಾಕಿಸ್ತಾನ ನಡುವಿನ ಎಲ್ಲಾ ಸಮಸ್ಯೆಗಳನ್ನು ಕೇವಲ ದ್ವಿಪಕ್ಷೀಯ ಮಾತುಕತೆ ಮೂಲಕವೇ ಬಗೆಹರಿಸುಕೊಳ್ಳುತ್ತೇವೆ ಅದಕ್ಕೆ ಅಮೇರಿಕಾ ಮಧ್ಯಸ್ಥಿಕೆ ಅಗತ್ಯವಿಲ್ಲ ಎಂದಿದೆ.
ಟ್ರಂಪ್ ಹೇಳಿಕೆ ಹೊರಬೀಳುತ್ತಿದ್ದಂತೆಯೇ ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್, ಕಾಶ್ಮೀರ ಸಮಸ್ಯೆಯನ್ನು ಭಾರತವು ದ್ವಿಪಕ್ಷೀಯ ನೆಲೆಯಲ್ಲಿ ಬಗೆಹರಿಸುವಲ್ಲಿ ಇಚ್ಚಿಸುತ್ತದೆ. ತನ್ನ ನಿಲುವಿಗೆ ಭಾರತ ಎಂದಿಗೂ ಬದ್ಧವಾಗಿರಲಿದೆ ಎಂದು ತಿಳಿಸಿದ್ದರು.

