Featured

ಕಾಶ್ಮೀರ ಸಮಸ್ಯೆಯನ್ನು ಮಾತುಕತೆ ಮೂಲಕವೇ ಬಗೆಹರಿಸುಕೊಳ್ಳುತ್ತೇವೆ ಅದಕ್ಕೆ ಅಮೇರಿಕಾ ಮಧ್ಯಸ್ಥಿಕೆ ಅಗತ್ಯವಿಲ್ಲ : ಟ್ರಂಪ್ ಗೆ ಭಾರತ -Vishwanews24

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಒಪ್ಪಿದರೆ ದಶಕಗಳಷ್ಟು ಹಳೆಯದಾದ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಸಲಹೆಯನ್ನು ಭಾರತ ತಿರಸ್ಕರಿಸಿದೆ.

ಭಾರತ, ಪಾಕಿಸ್ತಾನ ನಡುವಿನ ಎಲ್ಲಾ ಸಮಸ್ಯೆಗಳನ್ನು ಕೇವಲ ದ್ವಿಪಕ್ಷೀಯ ಮಾತುಕತೆ ಮೂಲಕವೇ ಬಗೆಹರಿಸಿಕೊಳ್ಳುವುದಾಗಿ ಭಾರತ ಸ್ಪಷ್ಟಪಡಿಸಿದೆ.

ಅಮೆರಿಕ ಪ್ರವಾಸದಲ್ಲಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಶ್ವೇತ ಭವನದಲ್ಲಿ ಟ್ರಂಪ್ ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಕಾಶ್ಮೀರ ವಿವಾದ ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ತಿಳಿಸಿದ್ದರು.

ಅಮೇರಿಕ ಪ್ರವಾಸದಲ್ಲಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಶ್ವೇತ ಭವನದಲ್ಲಿ ಟ್ರಂಪ್ ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಭಾರತವೇ ಆಹ್ವಾನ ನೀಡಿದಂತೆ, “ಕಾಶ್ಮೀರ ವಿವಾದ ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಹಿಸಲು ಸಿದ್ಧ” ಎಂದು ತಿಳಿಸಿದ್ದರು. ಈ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬುತ್ತಿದ್ದಂತೆ ವಿದೇಶಾಂಗ ಇಲಾಖೆ ಸ್ಪಷ್ಟನೆ ನೀಡಿದೆ. ಭಾರತ, ಪಾಕಿಸ್ತಾನ ನಡುವಿನ ಎಲ್ಲಾ ಸಮಸ್ಯೆಗಳನ್ನು ಕೇವಲ ದ್ವಿಪಕ್ಷೀಯ ಮಾತುಕತೆ ಮೂಲಕವೇ ಬಗೆಹರಿಸುಕೊಳ್ಳುತ್ತೇವೆ ಅದಕ್ಕೆ ಅಮೇರಿಕಾ ಮಧ್ಯಸ್ಥಿಕೆ ಅಗತ್ಯವಿಲ್ಲ ಎಂದಿದೆ.

ಟ್ರಂಪ್ ಹೇಳಿಕೆ ಹೊರಬೀಳುತ್ತಿದ್ದಂತೆಯೇ ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್, ಕಾಶ್ಮೀರ ಸಮಸ್ಯೆಯನ್ನು ಭಾರತವು ದ್ವಿಪಕ್ಷೀಯ ನೆಲೆಯಲ್ಲಿ ಬಗೆಹರಿಸುವಲ್ಲಿ ಇಚ್ಚಿಸುತ್ತದೆ. ತನ್ನ ನಿಲುವಿಗೆ ಭಾರತ ಎಂದಿಗೂ ಬದ್ಧವಾಗಿರಲಿದೆ ಎಂದು ತಿಳಿಸಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago