ಕಾಸರಗೋಡು: ಅಂಜುಶ್ರೀ ಸಾವಿಗೆ ವಿಷಾಹಾರ ಕಾರಣವಲ್ಲ  :– ಪ್ರಾಥಮಿಕ ವರದಿ – Vishwanews24

Featured, ರಾಷ್ಟ್ರ ನ್ಯೂಸ್

ಕಾಸರಗೋಡು: ಅಂಜುಶ್ರೀ ಸಾವಿಗೆ ವಿಷಾಹಾರ ಕಾರಣವಲ್ಲ  :– ಪ್ರಾಥಮಿಕ ವರದಿ

 ಕಾಸರಗೋಡು:ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ವಿದ್ಯಾರ್ಥಿನಿ ಪೆರುಂಬಳ ಬೇನೂರಿನ ಅಂಬಿಕಾ ಅವರ ಪುತ್ರಿ ಅಂಜುಶ್ರೀ (19) ಸಾವಿಗೆ ವಿಷಾಹಾರ ಕಾರಣವಲ್ಲ ಎಂದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ತಿಳಿಸಿದೆ.

ಕರುಳಿನ ನಿಷ್ಕ್ರಿಯತೆ ಹಾಗೂ ಜಾಂಡೀಸ್‌ನಿಂದಲೂ ಬಳಲುತ್ತಿದ್ದರು ಎಂದು ವರದಿಯಲ್ಲಿ ಹೇಳಿದೆ. ಹೆಚ್ಚಿನ ತನಿಖೆಗಾಗಿ ಅವರ ಆಂತರಿಕ ಅವಯವಗಳನ್ನು ರಾಸಾಯನಿಕ ಪರೀಕ್ಷೆಗೆ ಕಳುಹಿಸಲಾಗಿದೆ.

ಇದೇ ವೇಳೆ ಅಂಜುಶ್ರೀ ದೇಹದಲ್ಲಿ ವಿಷಾಂಶ ಪತ್ತೆಯಾಗಿದೆಯೆಂದೂ ವರದಿಯಲ್ಲಿ ಹೇಳಿದೆ.

ಶಿವಮೊಗ್ಗ: ಬಜರಂಗದಳ ಸಹ ಸಂಚಾಲಕ ಸುನೀಲ್ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನ – Vishwanews24

ಆಹಾರದಲ್ಲಿನ ವಿಷ ಅಲ್ಲವೆಂದು ಫಾರೆನ್ಸಿಕ್‌ ಸರ್ಜನ್‌ ಅವರ ಅಭಿಪ್ರಾಯವಾಗಿದೆ. ವಿಷವು ಕರುಳನ್ನು ಕಾರ್ಯನಿರ್ವಹಿಸದಂತೆ ನಿಲ್ಲಿಸಿದೆ ಎಂದು ವರದಿ ತಿಳಿಸಿದೆ.

ಶನಿವಾರ ಬೆಳಗ್ಗೆ ಅಂಜುಶ್ರೀ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದರು. ಡಿ. 31ರಂದು ಕುಳಿಮಂದಿ ಸೇವಿಸಿದ ಕಾರಣ ಅಸ್ವಸ್ಥತೆ ಕಾಣಿಸಿಕೊಂಡಿತ್ತು. ವಿಷಾಹಾರ ಸೇವನೆಯಿಂದ ಸಾವು ಸಂಭವಿಸಿತ್ತೆಂದು ಸಂಶಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹೊಟೇಲ್‌ ಮಾಲಕ ಸಹಿತ ಮೂವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.

ಕುಂದಾಪುರ : ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಗೃಹ ನಿರ್ಮಿಸಿಕೊಟ್ಟ ಗೋವಿಂದ ಬಾಬು ಪೂಜಾರಿ – Vishwanews24

Leave a Reply