ಕಾಸರಗೋಡು:ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ವಿದ್ಯಾರ್ಥಿನಿ ಪೆರುಂಬಳ ಬೇನೂರಿನ ಅಂಬಿಕಾ ಅವರ ಪುತ್ರಿ ಅಂಜುಶ್ರೀ (19) ಸಾವಿಗೆ ವಿಷಾಹಾರ ಕಾರಣವಲ್ಲ ಎಂದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ತಿಳಿಸಿದೆ.
ಕರುಳಿನ ನಿಷ್ಕ್ರಿಯತೆ ಹಾಗೂ ಜಾಂಡೀಸ್ನಿಂದಲೂ ಬಳಲುತ್ತಿದ್ದರು ಎಂದು ವರದಿಯಲ್ಲಿ ಹೇಳಿದೆ. ಹೆಚ್ಚಿನ ತನಿಖೆಗಾಗಿ ಅವರ ಆಂತರಿಕ ಅವಯವಗಳನ್ನು ರಾಸಾಯನಿಕ ಪರೀಕ್ಷೆಗೆ ಕಳುಹಿಸಲಾಗಿದೆ.
ಇದೇ ವೇಳೆ ಅಂಜುಶ್ರೀ ದೇಹದಲ್ಲಿ ವಿಷಾಂಶ ಪತ್ತೆಯಾಗಿದೆಯೆಂದೂ ವರದಿಯಲ್ಲಿ ಹೇಳಿದೆ.
ಆಹಾರದಲ್ಲಿನ ವಿಷ ಅಲ್ಲವೆಂದು ಫಾರೆನ್ಸಿಕ್ ಸರ್ಜನ್ ಅವರ ಅಭಿಪ್ರಾಯವಾಗಿದೆ. ವಿಷವು ಕರುಳನ್ನು ಕಾರ್ಯನಿರ್ವಹಿಸದಂತೆ ನಿಲ್ಲಿಸಿದೆ ಎಂದು ವರದಿ ತಿಳಿಸಿದೆ.
ಶನಿವಾರ ಬೆಳಗ್ಗೆ ಅಂಜುಶ್ರೀ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದರು. ಡಿ. 31ರಂದು ಕುಳಿಮಂದಿ ಸೇವಿಸಿದ ಕಾರಣ ಅಸ್ವಸ್ಥತೆ ಕಾಣಿಸಿಕೊಂಡಿತ್ತು. ವಿಷಾಹಾರ ಸೇವನೆಯಿಂದ ಸಾವು ಸಂಭವಿಸಿತ್ತೆಂದು ಸಂಶಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹೊಟೇಲ್ ಮಾಲಕ ಸಹಿತ ಮೂವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…