ಕಾಸರಗೋಡು ಅತ್ಯಾಚಾರ ಮತ್ತು ಮತಾಂತರ ಪ್ರಕರಣ : ಸಿಐಡಿಗೆ ವಹಿಸುವಂತೆ ಶೋಭಾ ಕರಂದ್ಲಾಜೆ ಮನವಿ -Vishwanews24

ಬೆಂಗಳೂರು: ಕೇರಳದ ಕಾಸರಗೋಡಿನ ಯುವತಿ ಮೇಲಿನ ಅತ್ಯಾಚಾರ ಮತ್ತು ಮತಾಂತರ ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಮನವಿ ಮಾಡಿದ್ದಾರೆ.

ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ಸೋಮವಾರ ಪೊಲೀಸ್‌ ಮಹಾನಿರ್ದೇಶಕರಾದ ನೀಲಮಣಿ ಎನ್‌.ರಾಜು ಮತ್ತು ಸಿಐಡಿ ಡಿಜಿಪಿ ಪ್ರವೀಣ್‌ ಸೂದ್‌ ಅವರನ್ನು ಭೇಟಿಯಾಗಿ ಪ್ರಕರಣ ಕುರಿತು ಚರ್ಚಿಸಿದ ಸಂಸದರು, ಪ್ರಕರಣ ಬೆಂಗಳೂರು, ಮಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ. ಎರಡು ರಾಜ್ಯಗಳಿಗೆ ಸಂಬಂಧಿಸಿದ್ದಾಗಿದೆ. ಅಲ್ಲದೆ, ಮತಾಂತರದಂತಹ ಹೇಯ ಕೃತ್ಯದ ಹಿಂದೆ ಯಾರೆಲ್ಲ ಇದ್ದಾರೆ ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕಿದೆ. ಹೀಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ಮನವಿ ಮಾಡಿದ್ದಾರೆ.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, 18 ವರ್ಷದ ಯುವತಿಗೆ ಮತ್ತು ಬರಿಸುವ ಔಷಧಿ ನೀಡಿ ಅತ್ಯಾಚಾರ ಎಸಗಿದಲ್ಲದೆ, ಇಡೀ ಕುಟುಂಬ ವನ್ನು ಮತಾಂತರಕ್ಕೆ ಯತ್ನಿಸಿದ್ದಾರೆ. ಈಗಾಗಲೇ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಅನ್ಸರ್‌ ಎಂಬಾತನನ್ನು ಬಂಧಿಸಿದ್ದಾರೆ. ಸಂತ್ರಸ್ತೆ ಹೇಳಿಕೆ ದಾಖಲಿಸಿಕೊಂಡು, ಆಕೆಯ ವೈದ್ಯಕೀಯ ಪರೀಕ್ಷೆ ಕೂಡ ನಡೆಸಲಾಗಿದೆ ಎಂದರು.

ಸಂತ್ರಸ್ತೆಯ ವೈಯಕ್ತಿಕ ವಿಡಿಯೋ ಇಟ್ಟುಕೊಂಡು ಆಕೆ ಸೇರಿ ಇಡೀ ಕುಟುಂಬ ಮತಾಂತರಕ್ಕೆ ಒತ್ತಾಯಿಸಿದ ಆರೋಪಿಗಳ ತಂಡ ಯಾವುದು? ಯಾವ ಕೆಲಸ ಮಾಡು ತ್ತಿದ್ದರು? ಅವರ ಅಕ್ರಮ ಚಟುವಟಿಕೆಗಳೇನು? ಮತಾಂತರಕ್ಕೆ ಯಾರೆಲ್ಲ ಪ್ರೇರಣೆ ನೀಡಿದ್ದಾರೆ? ಯಾರ ಜತೆ ಸಂಪರ್ಕ ಹೊಂದಿದ್ದರು? ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಸೂಚಿಸಿರುವುದಾಗಿ ಸಂಸದರು ಹೇಳಿದರು.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

7 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

7 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

8 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

9 hours ago