Featured

ಕಾಸರಗೋಡು: ಅವಳಿ ಕೊಲೆ ಪ್ರಕರಣ -10 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ; ಮಾಜಿ ಶಾಸಕನಿಗೆ 5 ವರ್ಷ ಸಜೆ – vishwanews24

ಕಾಸರಗೋಡು: ಅವಳಿ ಕೊಲೆ ಪ್ರಕರಣ: 10 ಆರೋಪಿಗಳಿಗೆ  ಜೀವಾವಧಿ ಶಿಕ್ಷೆ ; ಮಾಜಿ ಶಾಸಕ ಸಹಿತ ನಾಲ್ವರಿಗೆ 5 ವರ್ಷ ಸಜೆ

ಕಾಸರಗೋಡು: ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಪೆರಿಯ ಕಲ್ಯೊಟ್ ನಿವಾಸಿಗಳಾದ ಕೃಪೇಶ್ (19) ಮತ್ತು ಶರತ್ ಲಾಲ್(21) ಕೊಲೆ ಪ್ರಕರಣದ ಹತ್ತು ಮಂದಿ ಆರೋಪಿಗಳಿಗೆ ಅವಳಿ ಜೀವಾವಧಿ ಸಜೆ ಹಾಗೂ ಉದುಮ ಮಾಜಿ ಶಾಸಕ ಸಹಿತ ನಾಲ್ವರಿಗೆ ತಲಾ ಐದು ವರ್ಷ ಶಿಕ್ಷೆ ವಿಧಿಸಿ ಎರ್ನಾಕುಲಂ ಸಿಬಿಐ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

ಶಿಕ್ಷೆಗೊಳದವರಲ್ಲಿ ಉದುಮ ಮಾಜಿ ಶಾಸಕ ಕೆ.ವಿ.ಕುಂಞಿರಾಮನ್, ಕಾಞ೦ಗಾಡ್ ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ.ಮಣಿಕಂಠನ್ ಸೇರಿದ್ದಾರೆ.

ಸಿಪಿಎಂ ಸ್ಥಳೀಯ ಸಮಿತಿಯ ಮಾಜಿ ಸದಸ್ಯ ಪೆರಿಯದ ಎ.ಪೀತಾಂಬರನ್ (51), ಸಜಿ ಸಿ. ಜಾರ್ಜ್ (46), ಕೆ.ಎಂ.ಸುರೇಶ್(33), ಕೆ.ಅನಿಲ್ ಕುಮಾರ್ (41), ಗಿಜಿನ್(32), ಆರ್.ಪ್ರಶಾಂತ್(28), ಎ.ಅಶ್ವಿನ್(24), ಸುಭೀಷ್ (24), ಟಿ.ರಂಜಿತ್ (52) ಮತ್ತು ಎ.ಸುರೇಂದ್ರನ್( 53) ಎಂಬವರಿಗೆ ಅವಳಿ ಜೀವಾವಧಿ ಸಜೆ ಹಾಗೂ ತಲಾ ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಲಾಗಿದೆ.

ಮಾಜಿ ಶಾಸಕ ಕೆ.ವಿ.ಕುಂಞರಾಮನ್, ಕೆ.ಮಣಿಕಂಠನ್, ರಾಘವನ್ ವೆಳುತ್ತೊಳಿ, ಕೆ.ವಿ.ಭಾಸ್ಕರನ್ ಎಂಬವರಿಗೆ ತಲಾ ಐದು ವರ್ಷಗಳ ಸಜೆ ವಿಧಿಸಲಾಗಿದೆ.

2019ರ ಫೆಬ್ರವರಿ 17ರ ರಾತ್ರಿ ಕೃಪೇಶ್ ಮತ್ತು ಶರತ್ ಲಾಲ್ ರನ್ನು ತಂಡವು ಹತ್ಯೆ ಮಾಡಿತ್ತು. ಪ್ರಕರಣದ ಬಗ್ಗೆ ಸ್ಥಳೀಯ ಪೊಲೀಸ್ , ಕ್ರೈಮ್ ಬ್ರಾಂಚ್ ಹಾಗೂ ಸಿಬಿಐ ತನಿಖೆ ನಡೆಸಿತ್ತು. ಪ್ರಕರಣದಲ್ಲಿ ಒಟ್ಟು 24 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಪೈಕಿ ಹತ್ತು ಮಂದಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು .

ಸಿಪಿಎಂ ಮತ್ತು ಕಾಂಗ್ರೆಸ್ ನಡುವೆ ಪೆರಿಯ ಪರಿಸರದಲ್ಲಿ ಘರ್ಷಣೆ ನಡೆದಿತ್ತು. ಈ ದ್ವೇಷ ಇಬ್ಬರ ಕೊಲೆಯಲ್ಲಿ ಕೊನೆಗೊಂಡಿತ್ತು.

ಇಂದು ಪ್ರಕರಣದ ತೀರ್ಪು ಹೊರಬೀಳುವ ಹಿನ್ನಲೆಯಲ್ಲಿ ಪೆರಿಯ ಪರಿಸರದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಪೆರಿಯ ಸುತ್ತಮುತ್ತ ಕಟ್ಟೆಚ್ಚರ ವಹಿಸಲಾಗಿತ್ತು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

7 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

7 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

7 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

8 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

8 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

8 hours ago