Featured

ಕಾಸರಗೋಡು : ಆನ್ ಲೈನ್ ಮೂಲಕ ಖರೀದಿಸಿದ್ದ ಆಹಾರ ಸೇವಿಸಿ ಅಸ್ವಸ್ಥ – ವಿದ್ಯಾರ್ಥಿನಿ ಸಾವು – Vishwanews24

ಕಾಸರಗೋಡು : ಆನ್ ಲೈನ್ ಮೂಲಕ ಖರೀದಿಸಿದ್ದ ಆಹಾರ ಸೇವಿಸಿ ಅಸ್ವಸ್ಥ – ವಿದ್ಯಾರ್ಥಿನಿ ಸಾವು

ಕಾಸರಗೋಡು : ಹೊಸ ವರ್ಷದ ಹಿಂದಿನ ದಿನ ಆನ್ಲೈನ್ ಮೂಲಕ ತರಿಸಿದ ಊಟ ತಿಂದು 19 ವರ್ಷ ವಯಸ್ಸಿನ ವಿದ್ಯಾರ್ಥಿನಿ ಸಾವನಪ್ಪಿರುವ ಘಟನೆ ಕಾಸರಗೋಡಿನ ಪೆರುಂಬಳ ಬೇನೂರಿನಲ್ಲಿ ನಡೆದಿದೆ.

ಬೇನೂರು ತಲಕ್ಲಾಯಿಯ ಅಂಜುಶ್ರಿ ಪಾರ್ವತಿ ( 19) ಮೃತಪಟ್ಟ ವಿದ್ಯಾರ್ಥಿನಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಶಾಲೆಯ ಬಿ .ಕಾಂ ವಿದ್ಯಾರ್ಥಿನಿಯಾಗಿದ್ದಳು . ಆರು ದಿನಗಳ ಹಿಂದೆ ಹೋಟೆಲೊಂದರಿಂದ ಆನ್ ಲೈನ್ ಮೂಲಕ ಖರೀದಿಸಿದ್ದ ಆಹಾರವನ್ನು ಸೇವಿಸಿದ್ದು, ಬಳಿಕ ಅಸ್ವಸ್ಥ ಗೊಂಡಿದ್ದರು ಕಾಸರಗೋಡಿನ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ.

ಹೊಸವರ್ಷದ ಹಿನ್ನಲೆಯಲ್ಲಿ ಹೋಟೆಲ್ ನಿಂದ ಆನ್ ಲೈನ್ ಮೂಲಕ ಆಹಾರ ಖರೀದಿಸಿ ಕುಟುಂಬದವರ ಜೊತೆ ಸೇವಿಸಿದ್ದು ಆಹಾರ ಸೇವಿಸಿದ್ದ ಎಲ್ಲರಲ್ಲಿ ಅಸ್ವಸ್ಥತೆ ಕಂಡುಬಂದಿತ್ತು . ಆದರೆ ಅಂಜುಶ್ರಿ ತೀವ್ರ ಅಸ್ವಸ್ಥತೆ ಗೊಂಡ ಹಿನ್ನಲೆಯಲ್ಲಿ ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು . ಆದರೆ ಸ್ಥಿತಿ ಗಂಭೀರವಾದುರಿಂದ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಟೇಲ್ ಮಾಲಿಕ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago