ಕಾಸರಗೋಡು : ಹೊಸ ವರ್ಷದ ಹಿಂದಿನ ದಿನ ಆನ್ಲೈನ್ ಮೂಲಕ ತರಿಸಿದ ಊಟ ತಿಂದು 19 ವರ್ಷ ವಯಸ್ಸಿನ ವಿದ್ಯಾರ್ಥಿನಿ ಸಾವನಪ್ಪಿರುವ ಘಟನೆ ಕಾಸರಗೋಡಿನ ಪೆರುಂಬಳ ಬೇನೂರಿನಲ್ಲಿ ನಡೆದಿದೆ.
ಬೇನೂರು ತಲಕ್ಲಾಯಿಯ ಅಂಜುಶ್ರಿ ಪಾರ್ವತಿ ( 19) ಮೃತಪಟ್ಟ ವಿದ್ಯಾರ್ಥಿನಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಶಾಲೆಯ ಬಿ .ಕಾಂ ವಿದ್ಯಾರ್ಥಿನಿಯಾಗಿದ್ದಳು . ಆರು ದಿನಗಳ ಹಿಂದೆ ಹೋಟೆಲೊಂದರಿಂದ ಆನ್ ಲೈನ್ ಮೂಲಕ ಖರೀದಿಸಿದ್ದ ಆಹಾರವನ್ನು ಸೇವಿಸಿದ್ದು, ಬಳಿಕ ಅಸ್ವಸ್ಥ ಗೊಂಡಿದ್ದರು ಕಾಸರಗೋಡಿನ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ.
ಹೊಸವರ್ಷದ ಹಿನ್ನಲೆಯಲ್ಲಿ ಹೋಟೆಲ್ ನಿಂದ ಆನ್ ಲೈನ್ ಮೂಲಕ ಆಹಾರ ಖರೀದಿಸಿ ಕುಟುಂಬದವರ ಜೊತೆ ಸೇವಿಸಿದ್ದು ಆಹಾರ ಸೇವಿಸಿದ್ದ ಎಲ್ಲರಲ್ಲಿ ಅಸ್ವಸ್ಥತೆ ಕಂಡುಬಂದಿತ್ತು . ಆದರೆ ಅಂಜುಶ್ರಿ ತೀವ್ರ ಅಸ್ವಸ್ಥತೆ ಗೊಂಡ ಹಿನ್ನಲೆಯಲ್ಲಿ ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು . ಆದರೆ ಸ್ಥಿತಿ ಗಂಭೀರವಾದುರಿಂದ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಟೇಲ್ ಮಾಲಿಕ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಲಾಗಿದೆ.
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…
ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…